ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮ ಮಹಿಳಾ ವೃಂದದ ಸಭಾಂಗಣದಲ್ಲಿ ಸೆ.1 ರಂದು ನಡೆಯಿತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರ ಅಶೋಕ್ ವಹಿಸಿದ್ದರು

ಪುಟಾಣಿಗಳಗೆ ಮುದ್ದುಕೃಷ್ಣ, ಬಾಲಕೃಷ್ಣ,ಕೃಷ್ಣ-ರಾಧೆ ಸ್ಪರ್ದೆಗಳು ನಡೆಯಿತು. ಸುಮಾರು ಮಕ್ಕಳು ಭಾಗವಹಿಸಿ ಕೃಷ್ಣನ ಲೀಲೆಗಳನ್ನು ತೋರ್ಪಡಿಸಿ ಬಹುಮಾನ ಪಡೆದರು.

ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಶ್ಲೋಕಗಳು, ಶಂಖ ಊದುವ ಸ್ಪರ್ಧೆಯನ್ನು ನಡೆಸಲಾಯಿತು.

ಸಂಧ್ಯಾ ಪಾಳಂದೇ ಪ್ರಾರ್ಥಿಸಿ, ಉಮಾ ಆರ್ ರಾವ್ ಪ್ರಾಸ್ತಾವಿಕ ಮಾತನಾಡಿ ,ಸ್ವಾಗತಿಸಿದರು. ಹೇಮಾವತಿ ಕೆ ಕಾರ್ಯಕ್ರಮ ನಿರೂಪಿಸಿದರು. ತೀರ್ಪುಗಾರರಾಗಿ ಮಹಾವೀರ ಕಾಲೇಜು ಮೂಡಬಿದ್ರೆ ಸಂಸ್ಕೃತ ವಿಭಾಗದ ಉಪನ್ಯಾಸಕಿ ದಿವ್ಯ ಡೋಂಗ್ರೆ, ಮುಂಡಾಜೆ ಜೂನಿಯರ್ ಕಾಲೇಜ್ ಕನ್ನಡ ಉಪನ್ಯಾಸಕಿ ವಸಂತಿ ವೆಂಕಟೇಶ್ ಸಹಕರಿಸಿದರು. ಪ್ರಧಾನ ಕಾರ್ಯದರ್ಶಿ ಪ್ರೀತಿ ರತೀಶ್ ರಾವ್ ವಂದಿಸಿದರು.

ಮಹಿಳಾ ವೃಂದದ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Related posts

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya
error: Content is protected !!