25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಯನ್ಸ್ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಸಹಯೋಗದಲ್ಲಿ ಸೇವಾ ಕಾರ್ಯಕ್ರಮ ಸೆ. 2ರಂದು ನಡೆಯಿತು.

ಉಜಿರೆಯ ಸಾನಿದ್ಯ ಸ್ಕಿಲ್ ಟ್ರೈನಿಂಗ್ ಸೆಂಟರ್ ಗೆ ರೂ.25000 ಗಳ ಚೆಕ್ ಹಸ್ತಾಂತರ, ಲಾಯಿಲ ದಯಾ ವಿಶೇಷ ಶಾಲೆಗೆ ರೂ. 25000 ದೇಣಿಗೆ, ಕಾರ್ಕಳ ಹೊಸಬೆಳಕು ಸೇವಾ ಸಂಸ್ಥೆಗೆ ರೂ.25000, ಬೆಳ್ತಂಗಡಿ ಸಂಜಯನಗರದಲ್ಲಿರುವ ಓಲ್ಡ್ ಏಜ್ ಹೋಂ ಗೆ ರೂ.25000 ಮೌಲ್ಯದ ದಿನಸಿ ಹಾಗೂ ಆಹಾರ ಸಾಮಾಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಸೇವಾ ಟ್ರಸ್ಟ್ ಇದರ ಕಟ್ಟಡ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ ಬೆಂಗತ್ಯಾರ, ಸೇವಾ ಟ್ರಸ್ಟ್ ಕಟ್ಟಡ ಸಮಿತಿ ಕೋಶಾಧಿಕಾರಿಗಳಾದ ನಿತ್ಯಾನಂದ್ ನಾವರ, ಪೂರ್ವ ಪ್ರಾಂತಿಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ದಾ, ಸದಸ್ಯರಾದ ನಾಣ್ಯಪ್ಪ ನಾಯ್ಕ್, ಶಾಲಿನಿ ವಸಂತ್, ದೀಪ ಕಿರಣ್ ಉಪಸ್ಥಿತರಿದ್ದರು.

Related posts

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya
error: Content is protected !!