September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ:

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬಿ. ವಿ. ಸೂರ್ಯನಾರಾಯಣ ಭಟ್ ರವರು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ ಮತ್ತು ವಿದ್ಯಾರ್ಥಿಗಳ ಶಾರೀರಿಕ, ಮಾನಸಿಕ ಬೆಳವಣಿಗೆಯು ಅತೀಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಪೂವಾಜೆಯವರು ವಹಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಚಟುವಟಿಕೆಗೆ ಬೇಕಾಗುವ ಸವಲತ್ತುಗಳನ್ನು ಶಾಲೆಯಲ್ಲಿ ಒದಗಿಸಲಾಗುವುದು ಎಂದು ಹೇಳಿದರು. ಅತಿಥಿಗಳಾಗಿ ವಾಣಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ನೋಟರಿ ಬೆಳ್ತಂಗಡಿ ಹಾಗೂ ಸಂಸ್ಥೆಯ ಆಡಳಿತಾಧಿಕಾರಿಯಾದ ಪ್ರಸಾದ್ ಕುಮಾರ್, 2023-24ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಿವರಾಮ್ ಹೆಗ್ಡೆ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಾಣಿ ವಿದ್ಯಾಸಂಸ್ಥೆಯ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ. ಕೆ ಪ್ರಾಸ್ತಾವಿಕ ಮಾತುಗಳನ್ನಾಡುತ್ತ ಕಳೆದ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಪ್ರಗತಿಯ ಬಗ್ಗೆ ಮಾಹಿತಿಯನ್ನು ನೀಡಿ, ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ. ಎ ಇವರು ವಂದಿಸಿದರು ಹಾಗೂ ಶಿಕ್ಷಕಿ ಕು. ಹರಿಣಾಕ್ಷಿ. ಎನ್ ನಿರೂಪಿಸಿದರು ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂಧಿಗಳು ಸಹಕರಿಸಿದರು.

Related posts

ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರರವರಿಂದ ಅಭಿನಂದನೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಕಚೇರಿ ಉದ್ಘಾಟನೆ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!