July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ:

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬಿ. ವಿ. ಸೂರ್ಯನಾರಾಯಣ ಭಟ್ ರವರು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ ಮತ್ತು ವಿದ್ಯಾರ್ಥಿಗಳ ಶಾರೀರಿಕ, ಮಾನಸಿಕ ಬೆಳವಣಿಗೆಯು ಅತೀಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಪೂವಾಜೆಯವರು ವಹಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಚಟುವಟಿಕೆಗೆ ಬೇಕಾಗುವ ಸವಲತ್ತುಗಳನ್ನು ಶಾಲೆಯಲ್ಲಿ ಒದಗಿಸಲಾಗುವುದು ಎಂದು ಹೇಳಿದರು. ಅತಿಥಿಗಳಾಗಿ ವಾಣಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ನೋಟರಿ ಬೆಳ್ತಂಗಡಿ ಹಾಗೂ ಸಂಸ್ಥೆಯ ಆಡಳಿತಾಧಿಕಾರಿಯಾದ ಪ್ರಸಾದ್ ಕುಮಾರ್, 2023-24ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಿವರಾಮ್ ಹೆಗ್ಡೆ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಾಣಿ ವಿದ್ಯಾಸಂಸ್ಥೆಯ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ. ಕೆ ಪ್ರಾಸ್ತಾವಿಕ ಮಾತುಗಳನ್ನಾಡುತ್ತ ಕಳೆದ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಪ್ರಗತಿಯ ಬಗ್ಗೆ ಮಾಹಿತಿಯನ್ನು ನೀಡಿ, ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ. ಎ ಇವರು ವಂದಿಸಿದರು ಹಾಗೂ ಶಿಕ್ಷಕಿ ಕು. ಹರಿಣಾಕ್ಷಿ. ಎನ್ ನಿರೂಪಿಸಿದರು ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂಧಿಗಳು ಸಹಕರಿಸಿದರು.

Related posts

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟುಹಬ್ಬದ ಪ್ರಯುಕ್ತ ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಭಜನೆ ಹಾಗೂ ಪೂಜಾ ಕಾರ್ಯಕ್ರಮ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ಹದಗೆಟ್ಟಿರುವ ಸುಲ್ಕೇರಿಯ ದೇರಂಡೋಡಿ ಮತ್ತು ದೇವರಗುಡ್ಡೆ ರಸ್ತೆ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಭಿನಂದನ ಕಾರ್ಯಕ್ರಮ

Suddi Udaya
error: Content is protected !!