25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

ಶಿರ್ಲಾಲು : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಸೆ.3ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಉಷಾ ಎಂ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಶ್ರೀಮತಿ ಹೇಮಾಲತಾ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಪಂಚಾಯತ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಗುವ ಸಹಾಯ ಧನದ ಕುರಿತಾದ ಮಾಹಿತಿಗಳು ಗ್ರಾಮಸ್ಥರಿಗೆ ತಿಳಿದಿಲ್ಲ. ಈ ಬಗ್ಗೆ ಪಂಚಾಯತ್ ವತಿಯಿಂದ ಮಾಹಿತಿಗಳನ್ನು ನೀಡುವ ಕೆಲಸವಾಗಬೇಕು ಎಂದು ಬಾಬು ಎರ್ಮೆತ್ತೋಡಿ ಹೇಳಿದರು.

ಸರಕಾರ ಅಕೇಶಿಯ ಮರಗಳನ್ನು ನೆಡಲು ಅವಕಾಶವಿಲ್ಲ ಎಂದು ಹೇಳಿದೆ. ಹಾಗೂ ಅದನ್ನು ಕಡಿಯುವಂತಹ ಆದೇಶ ಹೊರಡಿಸಿದೆ. ಶಿರ್ಲಾಲು ವಿನಲ್ಲಿ ಕೆಲವೊಂದು ಭಾಗದಲ್ಲಿ ಅಕೇಶಿಯ ಮರಗಳು ಇದ್ದು ಇದರಿಂದ ನೀರಿನ ಸಮಸ್ಯೆಗಳು ಉಂಟಾಗುತ್ತದೆ ಎಂದು ಗ್ರಾಮಸ್ಥರೋರ್ವರು ಅರಣ್ಯ ಇಲಾಖಾಧಿಕಾರಿಗಳಲ್ಲಿ ತಿಳಿಸಿದರು.

ಸಭೆಯಲ್ಲಿ ಉಪಾಧ್ಯಕ್ಷ ಸೋಮನಾಥ ಬಂಗೇರ, ಸದಸ್ಯರಾದ ಶ್ರೀಮತಿ ಮಮತಾ ಜೈನ್, ಮಾಧವ, ಕೊರಗಪ್ಪ, ಶ್ರೀಮತಿ ಗೀತಾ, ಶ್ರೀಮತಿ ಜ್ಯೋತಿ ಪೂಜಾರಿ, ಶ್ರೀಮತಿ ಸುಶೀಲ, ಶ್ರೀಮತಿ ಗೀತಾ, ಪ್ರಕಾಶ್ ಹೆಗ್ಡೆ, ತಾರಾನಾಥ ಗೌಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಸುಶೀಲ ಸ್ವಾಗತಿಸಿ, ಅನುಪಾಲನ ವರದಿ ವಾಚಿಸಿದರು. ಪಂ. ಸಿಬ್ಬಂದಿ ಪವಿತಾ ಜಮಾಖರ್ಚು ವಿವರವನ್ನು ಮಂಡಿಸಿದರು.

Related posts

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!