23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

ಶಿರ್ಲಾಲು : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಸೆ.3ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಉಷಾ ಎಂ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಶ್ರೀಮತಿ ಹೇಮಾಲತಾ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಪಂಚಾಯತ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಗುವ ಸಹಾಯ ಧನದ ಕುರಿತಾದ ಮಾಹಿತಿಗಳು ಗ್ರಾಮಸ್ಥರಿಗೆ ತಿಳಿದಿಲ್ಲ. ಈ ಬಗ್ಗೆ ಪಂಚಾಯತ್ ವತಿಯಿಂದ ಮಾಹಿತಿಗಳನ್ನು ನೀಡುವ ಕೆಲಸವಾಗಬೇಕು ಎಂದು ಬಾಬು ಎರ್ಮೆತ್ತೋಡಿ ಹೇಳಿದರು.

ಸರಕಾರ ಅಕೇಶಿಯ ಮರಗಳನ್ನು ನೆಡಲು ಅವಕಾಶವಿಲ್ಲ ಎಂದು ಹೇಳಿದೆ. ಹಾಗೂ ಅದನ್ನು ಕಡಿಯುವಂತಹ ಆದೇಶ ಹೊರಡಿಸಿದೆ. ಶಿರ್ಲಾಲು ವಿನಲ್ಲಿ ಕೆಲವೊಂದು ಭಾಗದಲ್ಲಿ ಅಕೇಶಿಯ ಮರಗಳು ಇದ್ದು ಇದರಿಂದ ನೀರಿನ ಸಮಸ್ಯೆಗಳು ಉಂಟಾಗುತ್ತದೆ ಎಂದು ಗ್ರಾಮಸ್ಥರೋರ್ವರು ಅರಣ್ಯ ಇಲಾಖಾಧಿಕಾರಿಗಳಲ್ಲಿ ತಿಳಿಸಿದರು.

ಸಭೆಯಲ್ಲಿ ಉಪಾಧ್ಯಕ್ಷ ಸೋಮನಾಥ ಬಂಗೇರ, ಸದಸ್ಯರಾದ ಶ್ರೀಮತಿ ಮಮತಾ ಜೈನ್, ಮಾಧವ, ಕೊರಗಪ್ಪ, ಶ್ರೀಮತಿ ಗೀತಾ, ಶ್ರೀಮತಿ ಜ್ಯೋತಿ ಪೂಜಾರಿ, ಶ್ರೀಮತಿ ಸುಶೀಲ, ಶ್ರೀಮತಿ ಗೀತಾ, ಪ್ರಕಾಶ್ ಹೆಗ್ಡೆ, ತಾರಾನಾಥ ಗೌಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಸುಶೀಲ ಸ್ವಾಗತಿಸಿ, ಅನುಪಾಲನ ವರದಿ ವಾಚಿಸಿದರು. ಪಂ. ಸಿಬ್ಬಂದಿ ಪವಿತಾ ಜಮಾಖರ್ಚು ವಿವರವನ್ನು ಮಂಡಿಸಿದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!