27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

ಬೆಳ್ತಂಗಡಿ: ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಮಹತ್ವದ ಪಾತ್ರವನ್ನು ನಿಭಾಯಿಸಿ ಜನ ಮೆಚ್ಚುಗೆಯ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿರುವ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ., ಸಬ್ ಇನ್ಸ್ಪೆಕ್ಟರ್ ಆಗಿ ಬೆಳ್ತಂಗಡಿಯಲ್ಲಿ ಸೇವೆ ಸಲ್ಲಿಸಿ, ಬಳಿಕ ಪದೋನ್ನತಿ ಹೊಂದಿ ಬೆಳ್ತಂಗಡಿಯಲ್ಲೇ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದರು. ತಮ್ಮ ಅಧಿಕಾರ ಅವಧಿಯಲ್ಲಿ ಕಾನೂನು ಹಾಗೂ ನ್ಯಾಯವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಹತ್ತಿರದಿಂದ ಕೆಲಸ ಮಾಡಿದ್ದು, ಜನರಿಗೆ ನ್ಯಾಯ ಸಿಗುವಂತೆ ಜಾಗ್ರತೆ ವಹಿಸಿದ್ದಾರೆ.

ಈ ಕಾರಣಕ್ಕಾಗಿ ಮುಖ್ಯಮಂತ್ರಿಗಳ ವಿಶೇಷ ಸೇವಾ ಪ್ರಶಸ್ತಿಗೆ ಭಾಜನರಾದ ಇವರು, ಪ್ರಸ್ತುತ ಮೂಡಬಿದಿರೆ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಹಲವಾರು ಜನಪರ ಕಾರ್ಯಕ್ರಮಗಳ ಮುಖಾಂತರ ಕಾನೂನು ಮತ್ತು ನ್ಯಾಯವನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿ “ಖಡಕ್ ಅಧಿಕಾರಿ” ಎಂಬ ಹೆಸರಿಗೆ ಪಾತ್ರರಾಗಿದ್ದಾರೆ.

ಮುಖ್ಯಮಂತ್ರಿಗಳ ಪ್ರಶಸ್ತಿ ವಿಜೇತರಾದ ಸಂದೇಶ್ ಪಿ.ಜಿ. ಅವರನ್ನು ಮೂಡಬಿದರೆಯಲ್ಲಿ ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಹನಶ್ರೀ ಸೌಹಾರ್ದ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಭಾರತೀಯ ರೈಲ್ವೆ ಕುಂದುಕೊರತೆ ಸಮಿತಿ ಸದಸ್ಯ ರಾಜೇಶ್ ಪುದುಶೇರಿ, ಕೆ.ಎಸ್.ಎಂ.ಸಿ.ಎ. ಕೇಂದ್ರ ಸಮಿತಿಯ ಸೇಬಾಷ್ಟಿಯನ್ ಪಿ.ಸಿ., ಎಸ್ರ ಫೌಂಡೇಶನ್ ಮುಖ್ಯಸ್ಥ ಶಿಜು ಸಿ.ವಿ., ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನ ವಂದನೀಯ ಫಾ. ಶಾಜಿ ಮಾತ್ಯು ಮತ್ತು ಮೂಡಬಿದರೆಯ ಹೊಮ್ಸಕಾರ್ಟ್ ಸಂಸ್ಥೆಯ ಸ್ರಜನ್ ದಾಸ್ ಕಾರ್ಯಕ್ರಮದ ವ್ಯವಸ್ಥೆಯನ್ನು ಮಾಡಿಕೊಂಡಿದ್ದರು.

Related posts

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya
error: Content is protected !!