25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

ಬೆಳ್ತಂಗಡಿ: ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಮಹತ್ವದ ಪಾತ್ರವನ್ನು ನಿಭಾಯಿಸಿ ಜನ ಮೆಚ್ಚುಗೆಯ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿರುವ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ., ಸಬ್ ಇನ್ಸ್ಪೆಕ್ಟರ್ ಆಗಿ ಬೆಳ್ತಂಗಡಿಯಲ್ಲಿ ಸೇವೆ ಸಲ್ಲಿಸಿ, ಬಳಿಕ ಪದೋನ್ನತಿ ಹೊಂದಿ ಬೆಳ್ತಂಗಡಿಯಲ್ಲೇ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದರು. ತಮ್ಮ ಅಧಿಕಾರ ಅವಧಿಯಲ್ಲಿ ಕಾನೂನು ಹಾಗೂ ನ್ಯಾಯವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಹತ್ತಿರದಿಂದ ಕೆಲಸ ಮಾಡಿದ್ದು, ಜನರಿಗೆ ನ್ಯಾಯ ಸಿಗುವಂತೆ ಜಾಗ್ರತೆ ವಹಿಸಿದ್ದಾರೆ.

ಈ ಕಾರಣಕ್ಕಾಗಿ ಮುಖ್ಯಮಂತ್ರಿಗಳ ವಿಶೇಷ ಸೇವಾ ಪ್ರಶಸ್ತಿಗೆ ಭಾಜನರಾದ ಇವರು, ಪ್ರಸ್ತುತ ಮೂಡಬಿದಿರೆ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಹಲವಾರು ಜನಪರ ಕಾರ್ಯಕ್ರಮಗಳ ಮುಖಾಂತರ ಕಾನೂನು ಮತ್ತು ನ್ಯಾಯವನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿ “ಖಡಕ್ ಅಧಿಕಾರಿ” ಎಂಬ ಹೆಸರಿಗೆ ಪಾತ್ರರಾಗಿದ್ದಾರೆ.

ಮುಖ್ಯಮಂತ್ರಿಗಳ ಪ್ರಶಸ್ತಿ ವಿಜೇತರಾದ ಸಂದೇಶ್ ಪಿ.ಜಿ. ಅವರನ್ನು ಮೂಡಬಿದರೆಯಲ್ಲಿ ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಹನಶ್ರೀ ಸೌಹಾರ್ದ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಭಾರತೀಯ ರೈಲ್ವೆ ಕುಂದುಕೊರತೆ ಸಮಿತಿ ಸದಸ್ಯ ರಾಜೇಶ್ ಪುದುಶೇರಿ, ಕೆ.ಎಸ್.ಎಂ.ಸಿ.ಎ. ಕೇಂದ್ರ ಸಮಿತಿಯ ಸೇಬಾಷ್ಟಿಯನ್ ಪಿ.ಸಿ., ಎಸ್ರ ಫೌಂಡೇಶನ್ ಮುಖ್ಯಸ್ಥ ಶಿಜು ಸಿ.ವಿ., ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನ ವಂದನೀಯ ಫಾ. ಶಾಜಿ ಮಾತ್ಯು ಮತ್ತು ಮೂಡಬಿದರೆಯ ಹೊಮ್ಸಕಾರ್ಟ್ ಸಂಸ್ಥೆಯ ಸ್ರಜನ್ ದಾಸ್ ಕಾರ್ಯಕ್ರಮದ ವ್ಯವಸ್ಥೆಯನ್ನು ಮಾಡಿಕೊಂಡಿದ್ದರು.

Related posts

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ–ನೈರ್ಮಲ್ಯ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!