25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಡ್ಯದಲ್ಲಿ ಸೆ.2ರಂದು ರಸ್ತೆ ಒತ್ತುವರಿ ತೆರವುಗೊಳಿಸಿದ್ದು ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯನ್ನು ಶ್ರೀಪತಿ ಹೆಬ್ಬಾರ್ ಎಂಬವರು ಅತಿಕ್ರಮಣ ಮಾಡಿದ್ದು, ತೆರವುಗೊಳಿಸಬೇಕೆಂದು ಗ್ರಾಮಸಭೆಯಲ್ಲಿ ನಿರ್ಣಯಿಸಿದಂತೆ ಸೆ.2ರಂದು ಪೊಲೀಸ್ ಭದ್ರತೆಯಲ್ಲಿ ಗ್ರಾಮ ಪಂಚಾಯತ್ ರಸ್ತೆಯನ್ನು ಸಾರ್ವಜನಿಕರ ಸಂಚಾರಕ್ಕೆ ಅನುವುಮಾಡಿಕೊಡಲಾಯಿತು.

ಈ ಕುರಿತು ಮಾಹಿತಿ ಪಡೆದ ಆರ್.ಎಫ್.ಒ. ತ್ಯಾಗರಾಜ್, ಸೆ.2ರಂದು ಸಂಜೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ, ಈ ಕುರಿತು ಶೀಘ್ರದಲ್ಲೇ ತಹಶೀಲ್ದಾರ್ ಜತೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಡಿಆರ್‌ಎಫ್‌ಒ ರವಿಚಂದ್ರ ಜತೆಗಿದ್ದರು.

ಸೆ.3ರಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ತಾಲೂಕು ಭೂನ್ಯಾಯ ಮಂಡಳಿಯ ಸದಸ್ಯ ಬೊಮ್ಮಣ್ಣ ಗೌಡ, ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅನಿತಾ, ಉಪಾಧ್ಯಕ್ಷ ಪೂರ್ಣಾಕ್ಷ, ಅಭಿವೃದ್ಧಿ ಅಧಿಕಾರಿ ರವಿ ಬಸಪ್ಪನಗೌಡ, ಎಲ್ಲ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

Suddi Udaya

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya
error: Content is protected !!