26.4 C
ಪುತ್ತೂರು, ಬೆಳ್ತಂಗಡಿ
May 24, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

ಕೊಕ್ಕಡ: ಅಂಗಡಿ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದ ನನಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಕೊಕ್ಕಡ ಪಿಜಿನಡ್ಕ ನಿವಾಸಿ ಮಂಚ್ಚ ಮುಗೇರ ಅವರು ಸೆ.೧ರಂದು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.


ಸೆ.೦೧ರಂದು ಹಳ್ಳಂಗೇರಿಯ ರಾಮಣ್ಣ ಗೌಡರ ಅಂಗಡಿ ಬಳಿ ಬರುತ್ತಿದ್ದಂತೆ ಮಳೆ ಸುರಿದಿದ್ದು, ಛತ್ರಿ ಇಲ್ಲದ ಕಾರಣ ನಾನು ಅಂಗಡಿಯ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದು, ಈ ವೇಳೆ ಬಂದ ರಾಮಣ್ಣ ಗೌಡ ಇಲ್ಲೇಕೆ ಕುಳಿತ್ತಿದ್ದ ಎಂದು ಪ್ರಶ್ನಿಸಿ, “ನೀವು ನಿಮ್ಮ ಜಾತಿಯ ಬುದ್ದಿಯನ್ನು ಬಿಡುವುದಿಲ್ಲ ಎಂದು” ಹೇಳಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆಯ ಬಳಿಕ ಅದೇ ರಸ್ತೆಯಲ್ಲಿ ಕೆಲಸ ಬಿಟ್ಟು ಬರುತ್ತಿದ್ದ ಅವರ ಸೊಸೆ (ಮಗನ ಪತ್ನಿ) ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಬಳಿಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದೂರು ನೀಡಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!