30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

ಕೊಕ್ಕಡ: ಅಂಗಡಿ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದ ನನಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಕೊಕ್ಕಡ ಪಿಜಿನಡ್ಕ ನಿವಾಸಿ ಮಂಚ್ಚ ಮುಗೇರ ಅವರು ಸೆ.೧ರಂದು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.


ಸೆ.೦೧ರಂದು ಹಳ್ಳಂಗೇರಿಯ ರಾಮಣ್ಣ ಗೌಡರ ಅಂಗಡಿ ಬಳಿ ಬರುತ್ತಿದ್ದಂತೆ ಮಳೆ ಸುರಿದಿದ್ದು, ಛತ್ರಿ ಇಲ್ಲದ ಕಾರಣ ನಾನು ಅಂಗಡಿಯ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದು, ಈ ವೇಳೆ ಬಂದ ರಾಮಣ್ಣ ಗೌಡ ಇಲ್ಲೇಕೆ ಕುಳಿತ್ತಿದ್ದ ಎಂದು ಪ್ರಶ್ನಿಸಿ, “ನೀವು ನಿಮ್ಮ ಜಾತಿಯ ಬುದ್ದಿಯನ್ನು ಬಿಡುವುದಿಲ್ಲ ಎಂದು” ಹೇಳಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆಯ ಬಳಿಕ ಅದೇ ರಸ್ತೆಯಲ್ಲಿ ಕೆಲಸ ಬಿಟ್ಟು ಬರುತ್ತಿದ್ದ ಅವರ ಸೊಸೆ (ಮಗನ ಪತ್ನಿ) ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಬಳಿಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದೂರು ನೀಡಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!