July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

ಕೊಕ್ಕಡ: ಅಂಗಡಿ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದ ನನಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಕೊಕ್ಕಡ ಪಿಜಿನಡ್ಕ ನಿವಾಸಿ ಮಂಚ್ಚ ಮುಗೇರ ಅವರು ಸೆ.೧ರಂದು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.


ಸೆ.೦೧ರಂದು ಹಳ್ಳಂಗೇರಿಯ ರಾಮಣ್ಣ ಗೌಡರ ಅಂಗಡಿ ಬಳಿ ಬರುತ್ತಿದ್ದಂತೆ ಮಳೆ ಸುರಿದಿದ್ದು, ಛತ್ರಿ ಇಲ್ಲದ ಕಾರಣ ನಾನು ಅಂಗಡಿಯ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದು, ಈ ವೇಳೆ ಬಂದ ರಾಮಣ್ಣ ಗೌಡ ಇಲ್ಲೇಕೆ ಕುಳಿತ್ತಿದ್ದ ಎಂದು ಪ್ರಶ್ನಿಸಿ, “ನೀವು ನಿಮ್ಮ ಜಾತಿಯ ಬುದ್ದಿಯನ್ನು ಬಿಡುವುದಿಲ್ಲ ಎಂದು” ಹೇಳಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆಯ ಬಳಿಕ ಅದೇ ರಸ್ತೆಯಲ್ಲಿ ಕೆಲಸ ಬಿಟ್ಟು ಬರುತ್ತಿದ್ದ ಅವರ ಸೊಸೆ (ಮಗನ ಪತ್ನಿ) ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಬಳಿಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದೂರು ನೀಡಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya
error: Content is protected !!