July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ ಶಿಪ್-2024ಕ್ಕೆ ಖೇಲೋ ಭಾರತ್ ಯೂತ್ ಗೇಮ್ಸ್ ಫೆಡರೇಶನ್ ಇಂಡಿಯಾ ತಂಡವನ್ನು ಪ್ರತಿನಿಧಿಸಿದ ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನಗಳಿಸಿ ಹೊರ ಹೊಮ್ಮಿದೆ.

ನೇಪಾಳದ ಪೋಖರ ರಂಗಶಾಲಾದಲ್ಲಿ ಆ.31, ಸೆ.1,2ರಂದು ನಡೆದ ಪಂದ್ಯಾಟದಲ್ಲಿ ಭಾಗವಹಿಸಿದ ಪುರುಷ ಮತ್ತು ಮಹಿಳೆಯರ ಖೇಲೋ ಭಾರತ್ ಯೂತ್ ಗೇಮ್ಸ್ ಫೆಡರೇಶನ್ ಇಂಡಿಯಾ ತಂಡ ಪ್ರಥಮ ಸ್ಥಾನಗಳಿಸಿ ಜಯಶಾಲಿಯಾಗಿದೆ.

ಪುರುಷರ ತಂಡದಲ್ಲಿ ವೈಯಕ್ತಿಕ ನೆಲೆಯಲ್ಲಿ ತಂಡದ ನಾಯಕ ಕಣಿಯೂರು ಗ್ರಾಮದ ಕದ್ರಿ ನಿವಾಸಿ ರತ್ನ ಕೆ. ಮತ್ತು ಮಂಜುನಾಥ್ ಗೌಡ ದಂಪತಿಯ ಪುತ್ರ ಯೂನಿತ್ ಕೆ. ಉತ್ತಮ ಅಲ್ ರೌಂಡರ್ ಪ್ರಶಸ್ತಿ ಪಡೆದರು. ಇಳಂತಿಲ ಗ್ರಾಮದ ನೆಲ್ಲಿಪಲ್ಲಿಕೆ ನಿವಾಸಿ ಧನಂಜಯ ಗೌಡ ಮತ್ತು ಭಾರತಿ ದಂಪತಿಯ ಪುತ್ರ ರೋಹಿತ್ ಉತ್ತಮ ಎಸೆತಗಾರ ಪ್ರಶಸ್ತಿ ಮುಡಿಗೇರಿಸಿಕೊಂಡರು. ಮಡಂತ್ಯಾರಿನ ಸೇಬಾಸ್ಟಿನ್ ವೇಗಸ್ ಹಾಗೂ ಲೀನಾ ವೇಗಸ್ ದಂಪತಿಯ ಪುತ್ರ ಶಾನ್ ವೇಗಸ್ ಹಾಗೂ ಅಚ್ಚುತ ಮತ್ತು ಗಿರಿಜಾ ರವರ ಪುತ್ರ ಅವಿನಾಶ್ ಉತ್ತಮ ಪ್ರದರ್ಶನ ನೀಡಿದರು. ಪ್ರಜ್ವಲ್, ಕರಿಯಪ್ಪ, ದಿಕ್ಷೀತ್, ರವಿ ವರ್ಧನ್, ರಕ್ಷಿತ್, ಪೆಮ್ಮೆಯ್ಯ ಹಾಗೂ ದರ್ಶನ್ ತಂಡದಲ್ಲಿದ್ದರು.

ಮಿಂಚಿದ ಮಡಂತ್ಯಾರಿನ ಡಾಫ್ನಿ ವೆರೋನಿಕ: ಮಹಿಳೆಯರ ತಂಡವನ್ನು ಪ್ರತಿನಿಧಿಸಿದ ಮಡಂತ್ಯಾರಿನ ಕ್ಲೋಡ್ ಫ್ರಾನ್ಸಿಸ್ ಮಿಸ್ಕ್ಯುತ್ ಹಾಗೂ ಡಯಾನ ಮಿಸ್ಕ್ಯುತ್ ದಂಪತಿ ಪುತ್ರಿ ಡಾಫಿ ವೆರೋನಿಕ ಉತ್ತಮ ಅಲ್ ರೌಂಡ‌ರ್ ಪ್ರಶಸ್ತಿಗೆ ಭಾಜನರಾದರು. ತಂಡದ ನಾಯಕಿ ಸುಪ್ರಿಯಾ ಎಸ್.ಪಿ. ಉತ್ತಮ ಎಸೆತಗಾರ ಪ್ರಶಸ್ತಿ ಪಡೆದರು. ಇವರು ಬಂಟ್ವಾಳ ತಾಲೂಕಿನ ಕಸಬಾ ಕೆತ್ತಿಮಾರಿನ ನಿವಾಸಿ ಶೀನಾಥ್ ಸಿ. ಹಾಗೂ ಪೂರ್ಣಿಮಾ ದಂಪತಿಯ ಪುತ್ರಿ. ಸಿಂಚನ, ಭೂಮಿಕಾ, ಉಷಾ, ಭವನಾ ಹಾಗೂ ಗಾನಾವಿ ಉತ್ತಮ ಪ್ರದರ್ಶನ ನೀಡಿದರು. ಎರಡು ತಂಡಗಳಿಗೆ ಕೊಡಗಿನ ವೀರಾಜಪೇಟೆಯ ರೈಶಿಂಗ್ ಸ್ಟಾರ್ ಕೋಚಿಂಗ್ ಸೆಂಟರ್‌ನ ಶಿಬಿರದಲ್ಲಿ ತರಬೇತಿ ಪಡೆದಿದ್ದರು.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya
error: Content is protected !!