25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

ಮೂಡಬಿದ್ರೆಯ ಕನ್ನಡ ಕಲಾಭವನದಲ್ಲಿ ವಿಶ್ವವಿಖ್ಯಾತ ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಮಹಾತ್ಮೆಯ ಕರ್ತೃ ನಿತಿನ್ ಕುಮಾರ್ ತೆಂಕಕಾರಂದೂರು ರಚಿಸಿ ನಿರ್ದೇಶಿಸಿದ, ಯೋಗೀಶ್ ರಾವ್ ಚಿಗುರುಪಾದೆ ಪದ್ಯ ರಚನೆಯ ಕುಲ ದೈವೋ ಬ್ರಹ್ಮ ಎಂಬ ನೂತನ ಯಕ್ಷಗಾನ ಪ್ರಸಂಗ ಸಾವಿರಾರು ಕಲಾಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಅಧ್ಯಕ್ಷರಾದ ಶ್ರೀ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭುಜಬಲಿ ಜೈನ್, ಜಾನಪದ ವಿದ್ವಾಂಸ ಶೇಖರ್, ಮೂಡಬಿದ್ರೆ ನಗರಸಭೆ ಸದಸ್ಯರಾದ ಸುರೇಶ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ್, ಗೆಜ್ಜೆ ಗಿರಿ ಕ್ಷೇತ್ರದ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಗುರು ನಾರಾಯಣಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಅಧ್ಯಕ್ಷರಾದ ಜಯ ವಿಕ್ರಮ್, ಬಿಲ್ಲವ ಸಂಘ ಮೂಡಬಿದಿರೆಯ ಅಧ್ಯಕ್ಷ ಸುರೇಶ್ ಕೆ ಪೂಜಾರಿ. ಇರುವೆಯಲು ಬಿಲ್ಲವ ಸಂಘದ ಅಧ್ಯಕ್ಷರಾದ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಕರ ಕುಕ್ಕೆಡಿ, ವೇಣೂರು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್, ವಕೀಲರಾದ ನಾಗೇಶ್ ಶೆಟ್ಟಿ, ಹಾಗೂ ಇತರ ಗಣ್ಯರ ಸಮಕ್ಷದಮದಲ್ಲಿ ಜರಗಿತು. ಯಕ್ಷಗಾನಕ್ಕೆ ಶ್ರಮಿಸಿದ ಹಿರಿಯ ಮತ್ತು ಕಿರಿಯ ಕಲಾವಿದರು ಗಳನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

Related posts

ಆಶುಭಾಷಣ ಸ್ಪರ್ಧೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸುಮೇದ ಕೃಷ್ಣ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya
error: Content is protected !!