July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮ ಮಹಿಳಾ ವೃಂದದ ಸಭಾಂಗಣದಲ್ಲಿ ಸೆ.1 ರಂದು ನಡೆಯಿತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರ ಅಶೋಕ್ ವಹಿಸಿದ್ದರು

ಪುಟಾಣಿಗಳಗೆ ಮುದ್ದುಕೃಷ್ಣ, ಬಾಲಕೃಷ್ಣ,ಕೃಷ್ಣ-ರಾಧೆ ಸ್ಪರ್ದೆಗಳು ನಡೆಯಿತು. ಸುಮಾರು ಮಕ್ಕಳು ಭಾಗವಹಿಸಿ ಕೃಷ್ಣನ ಲೀಲೆಗಳನ್ನು ತೋರ್ಪಡಿಸಿ ಬಹುಮಾನ ಪಡೆದರು.

ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಶ್ಲೋಕಗಳು, ಶಂಖ ಊದುವ ಸ್ಪರ್ಧೆಯನ್ನು ನಡೆಸಲಾಯಿತು.

ಸಂಧ್ಯಾ ಪಾಳಂದೇ ಪ್ರಾರ್ಥಿಸಿ, ಉಮಾ ಆರ್ ರಾವ್ ಪ್ರಾಸ್ತಾವಿಕ ಮಾತನಾಡಿ ,ಸ್ವಾಗತಿಸಿದರು. ಹೇಮಾವತಿ ಕೆ ಕಾರ್ಯಕ್ರಮ ನಿರೂಪಿಸಿದರು. ತೀರ್ಪುಗಾರರಾಗಿ ಮಹಾವೀರ ಕಾಲೇಜು ಮೂಡಬಿದ್ರೆ ಸಂಸ್ಕೃತ ವಿಭಾಗದ ಉಪನ್ಯಾಸಕಿ ದಿವ್ಯ ಡೋಂಗ್ರೆ, ಮುಂಡಾಜೆ ಜೂನಿಯರ್ ಕಾಲೇಜ್ ಕನ್ನಡ ಉಪನ್ಯಾಸಕಿ ವಸಂತಿ ವೆಂಕಟೇಶ್ ಸಹಕರಿಸಿದರು. ಪ್ರಧಾನ ಕಾರ್ಯದರ್ಶಿ ಪ್ರೀತಿ ರತೀಶ್ ರಾವ್ ವಂದಿಸಿದರು.

ಮಹಿಳಾ ವೃಂದದ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Related posts

ಪಡ್ಯಾರಬೆಟ್ಟು ಕ್ಷೇತ್ರದ ಅನುವಂಶೀಕ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ರವರಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವೇಣೂರು ಇದರ ಬೆಳ್ಳಿಹಬ್ಬ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

Suddi Udaya

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya
error: Content is protected !!