July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

ಕೊಕ್ಕಡ : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಸೆ.4ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿ ರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ಕೃಷಿ ಇಲಾಖಾ ಅಧಿಕಾರಿ ರಂಜಿತ್ ಕುಮಾರ್ ರವರು ಗ್ರಾಮ ಸಭೆಯಲ್ಲಿ ಭಾಗವಹಿಸಿದ್ದರು.

ಕೊಕ್ಕಡದ ರಥಬೀದಿ, ನೆಲ್ಯಾಡಿ ಪುತ್ಯೆ, ಕೊಕ್ಕಡ, ಪಟ್ಟೂರು- ಪಟ್ರಮೆ ರಸ್ತೆಯು ಜಿಲ್ಲಾ ಪಂಚಾಯತ್ ಗೆ ಸಂಬಂಧ ಪಟ್ಟಿದ್ದು. ರಸ್ತೆಯ ಸಮಸ್ಯೆಗಳ ಬಗ್ಗೆ ಹಲವು ಸಮಯಗಳಿಂದ ಗ್ರಾಮ ಮಟ್ಟದ ಅಧಿಕಾರಿಗಳಲ್ಲಿ ಹೇಳಿ ಯಾವುದೇ ಪ್ರಯೋಜನವಾಗಿಲ್ಲ. ತಾಲೂಕು ಮಟ್ಟದ ಅಧಿಕಾರಿಗಳು ಬರಬೇಕು. ಹಾಗೂ ಗ್ರಾಮ ಸಭೆಗೆ ಪಿ ಡಬ್ಲ್ಯೂ ಡಿ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಗ್ರಾಮ ಸಭೆಯಲ್ಲಿ ಭಾಗವಹಿಸದೆ ಇರುವುದರಿಂದ ಗ್ರಾಮ ಸಭೆಯನ್ನು ನಡೆಸುವುದಕ್ಕೆ ಬಿಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

ಈ ಬಗ್ಗೆ ಗ್ರಾಮ ಪಂಚಾಯತ್ ಸದಸ್ಯ ಯೋಗೀಶ್ ಅಳಂಬಿಲ ಮಾತನಾಡಿ ಮುಂದಿನ ದಿನಗಳಲ್ಲಿ ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳನ್ನು ಕರಿಸಿ ಸಭೆಯನ್ನು ನಡೆಸುತ್ತೇವೆ ಎಂದು ಅಧ್ಯಕ್ಷರ ಮೇರೆಗೆ ಗ್ರಾಮ ಸಭೆಯನ್ನು ಮುಂದೂಡಿದರು.

ಸಭೆಯಲ್ಲಿ ಉಪಾಧ್ಯಕ್ಷ ಪ್ರಭಾಕರ ಗೌಡ, ಸದಸ್ಯರಾದ ಪವಿತ್ರಾ ಕೆ., ವಿಶ್ವನಾಥ ಮಲೆಕುಡಿಯ, ಲತಾ, ವಣಜಾಕ್ಷ ಆಚಾರ್ಯ, ಪುರುಷೋತ್ತಮ ಗೌಡ, ಜಗದೀಶ್ ಪೂಜಾರಿ, ಪ್ರಮೀಳಾ ಜಿ. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ಬೆಳ್ತಂಗಡಿ ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ 16ನೇ ವರ್ಷದ ಸಾಂಸ್ಕೃತಿಕ ವೈಭವ , ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ-2026 ಪ್ರದಾನ

Suddi Udaya

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
error: Content is protected !!