30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

ಕೊಕ್ಕಡ : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಸೆ.4ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿ ರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ಕೃಷಿ ಇಲಾಖಾ ಅಧಿಕಾರಿ ರಂಜಿತ್ ಕುಮಾರ್ ರವರು ಗ್ರಾಮ ಸಭೆಯಲ್ಲಿ ಭಾಗವಹಿಸಿದ್ದರು.

ಕೊಕ್ಕಡದ ರಥಬೀದಿ, ನೆಲ್ಯಾಡಿ ಪುತ್ಯೆ, ಕೊಕ್ಕಡ, ಪಟ್ಟೂರು- ಪಟ್ರಮೆ ರಸ್ತೆಯು ಜಿಲ್ಲಾ ಪಂಚಾಯತ್ ಗೆ ಸಂಬಂಧ ಪಟ್ಟಿದ್ದು. ರಸ್ತೆಯ ಸಮಸ್ಯೆಗಳ ಬಗ್ಗೆ ಹಲವು ಸಮಯಗಳಿಂದ ಗ್ರಾಮ ಮಟ್ಟದ ಅಧಿಕಾರಿಗಳಲ್ಲಿ ಹೇಳಿ ಯಾವುದೇ ಪ್ರಯೋಜನವಾಗಿಲ್ಲ. ತಾಲೂಕು ಮಟ್ಟದ ಅಧಿಕಾರಿಗಳು ಬರಬೇಕು. ಹಾಗೂ ಗ್ರಾಮ ಸಭೆಗೆ ಪಿ ಡಬ್ಲ್ಯೂ ಡಿ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಗ್ರಾಮ ಸಭೆಯಲ್ಲಿ ಭಾಗವಹಿಸದೆ ಇರುವುದರಿಂದ ಗ್ರಾಮ ಸಭೆಯನ್ನು ನಡೆಸುವುದಕ್ಕೆ ಬಿಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

ಈ ಬಗ್ಗೆ ಗ್ರಾಮ ಪಂಚಾಯತ್ ಸದಸ್ಯ ಯೋಗೀಶ್ ಅಳಂಬಿಲ ಮಾತನಾಡಿ ಮುಂದಿನ ದಿನಗಳಲ್ಲಿ ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳನ್ನು ಕರಿಸಿ ಸಭೆಯನ್ನು ನಡೆಸುತ್ತೇವೆ ಎಂದು ಅಧ್ಯಕ್ಷರ ಮೇರೆಗೆ ಗ್ರಾಮ ಸಭೆಯನ್ನು ಮುಂದೂಡಿದರು.

ಸಭೆಯಲ್ಲಿ ಉಪಾಧ್ಯಕ್ಷ ಪ್ರಭಾಕರ ಗೌಡ, ಸದಸ್ಯರಾದ ಪವಿತ್ರಾ ಕೆ., ವಿಶ್ವನಾಥ ಮಲೆಕುಡಿಯ, ಲತಾ, ವಣಜಾಕ್ಷ ಆಚಾರ್ಯ, ಪುರುಷೋತ್ತಮ ಗೌಡ, ಜಗದೀಶ್ ಪೂಜಾರಿ, ಪ್ರಮೀಳಾ ಜಿ. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya
error: Content is protected !!