23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

ಬೆಳ್ತಂಗಡಿ:ಕುಕ್ಕೆ ಸುಬ್ರಮಣ್ಯ ಕುಮಾಧಾರದ ಹತ್ತಿರ ಮಹಿಳೆಯೊರ್ವರು ಮನನೊಂದು ಅಲ್ಲಿ ಇಲ್ಲಿ ಸುತ್ತಾಡುತ್ತಿರುವ ವೇಳೆ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಸಮಾಜ ಸೇವಾ ಟ್ರಸ್ಟ್ ನ ಕೋಶಾಧಿಕಾರಿಯಾದ ಮಣಿಕಂಠನವರು ಇದನ್ನು ಗಮನಿಸಿ ತತಕ್ಷಣವೇ ಸಮಾಜ ಸೇವಕ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷರಾದ ರವಿ ಕಕ್ಕೆ ಪದವು ರವರಿಗೆ ಮಾಹಿತಿ ನೀಡಿದರು.

ತಕ್ಷಣವೇ ರವಿ ಕಕ್ಯೆಪದವು ಬಂದು ಆ ಮಹಿಳೆಯನ್ನು ವಿಚಾರಿಸಿದಾಗ ಆ ಮಹಿಳೆ ಮನನೊಂದು ನಾನು ಸಾಯಬೇಕು ಎನ್ನುವ ದುಃಖವನ್ನು ತೋಡಿಕೊಂಡರು.ನಂತರ ರವಿ ಕಕ್ಕೆ ಪದವು ಹಾಗೂ ಮಣಿಕಂಠನವರು ಸೇರಿ ಮಹಿಳೆಯ ಕುಟುಂಬಸ್ಥರನ್ನು ಸಂಪರ್ಕಿಸಿ,ಅವರನ್ನು ಕುಕ್ಕೆಸುಬ್ರಹ್ಮಣ್ಯಕ್ಕೆ ಕರೆಸಿ ಮಾತನಾಡಿ ಮಹಿಳೆಯನ್ನು ಕುಟುಂಬದ ಜೊತೆ ಕಳಿಸುವ ಕೆಲಸ ಮಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

Related posts

ಬಳಂಜ ಗ್ರಾ.ಪಂ ನೂತನ‌ ಅಧ್ಯಕ್ಷೆ,ಉಪಾಧ್ಯಕ್ಷ ರಿಗೆ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya
error: Content is protected !!