July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

ನಾರಾವಿ ಗ್ರಾಮ ಪಂಚಾಯತ್ ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮವು ಸೆ.4ರಂದು ನಡೆಯಿತು.

ನೈಜ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಕಾರ್ಯಕ್ರಮದ ಮಹಾ ಅಭಿಯಾನ-2 ಕಾರ್ಯಕ್ರಮದಲ್ಲಿ ಕೊರಗ ಸಮುದಾಯಕ್ಕೆ ಅವಶ್ಯವಿರುವ ಸರ್ಕಾರಿ ದಾಖಲೆಗಳಾದ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ ಹಾಗೂ ಅಭಾಕಾರ್ಡ್ ಗಳನ್ನು ಒದಗಿಸಲು ವಿವಿಧ ಇಲಾಖೆಗಳ ಸಮ್ಮುಖದಲ್ಲಿ ಶಿಬಿರವನ್ನು ಹಮ್ಮಿಕೊಂಡು, ವೈದ್ಯಕೀಯ ತಪಾಸಣೆ ನಡೆಸಿ, ಸೂಕ್ತ ದಾಖಲೆಗಳನ್ನು ಪಡೆಯಲಾಯಿತು.

ಆದಿವಾಸಿ ಕೊರಗ ಸಮುದಾಯದಲ್ಲಿ ಸರಕಾರಿ ದಾಖಲೆಗಳು ಇಲ್ಲದೇ ಇರುವುದರಿಂದ, ಸರಕಾರದ ಯೋಜನೆಗಳನ್ನು ಪಡೆಯುವಲ್ಲಿ ವಿಫಲರಾಗುತ್ತಾರೆ. ಆದುದರಿಂದ ಈ ಜನ್ ಮನ್ ಕಾರ್ಯಕ್ರಮದಲ್ಲಿ ಕೊರಗ ಸಮುದಾಯದವರು ಎಲ್ಲಾ ದಾಖಲೆಗಳನ್ನು ಪಡೆಯುವಲ್ಲಿ, ವಿವಿಧ ಇಲಾಖೆಗಳು ಈ ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ, ಸುಲಭವಾಗಿ ದಾಖಲೆಗಳನ್ನು ಪಡೆಯಬಹುದಾಗಿದೆ ಎಂದು ಹೇಮಚಂದ್ರ ಸಹಾಯಕ ನಿರ್ದೇಶಕರು ಪಸ್ತಾವಿಸಿದರು.

ಕಾರ್ಯಕ್ರಮದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ, ಬೆಳ್ತಂಗಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶೇಷಗಿರಿ ನಾಯಕ, ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹೇಮಚಂದ್ರ ಮತ್ತು ನಾರಾವಿ ಗ್ರಾಮದ ಕೊರಗ ಸಮುದಾಯದವರು ಉಪಸ್ಥಿತರಿದ್ದರು.

ಶ್ರೀಮತಿ ಹೇಮಲತಾ ಗಿರಿಜನ ಕಲ್ಯಾಣ ವಿಸ್ತರಣಾಧಿಕಾರಿಗಳು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!