23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

ವೇಣೂರು: ಡಾ. ಸುಕೇಶ್ ಕುಮಾರ್ ಬಜಿರೆ ಇವರು ಡಾ. ರಾಜೇಶ್ ಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ರೋಲ್ ಆಫ್ ಕ್ವೊರಮ್ ಸೆನ್ಸಿಂಗ್ ಇನ್ ಸುಡೋಮೋನಾಸ್ ಅರಜಿನೋಸ ಅಡಾಪ್ಟ್ಯೇಷನ್ ಡ್ಯೂರಿಂಗ್ ಕ್ರಾನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್” ಎಂಬ ಮಹಾಪ್ರಬಂಧಕ್ಕೆ ದೇರಳಕಟ್ಟೆಯ ಯೇನೆಪೊಯ ಪರಿಗಣಿತ ವಿಶ್ವವಿದ್ಯಾನಿಲಯವು ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿಯನ್ನು ನೀಡಿ ಗೌರವಿಸಿದೆ.


25ಕ್ಕೂ ಮೀರಿದ ರಿಸರ್ಚ್ ಪೇಪರ್ ಗಳನ್ನು ಇಂಟರ್ನ್ಯಾಷನಲ್ ಜರ್ನಲ್ ಗಳಲ್ಲಿ ಪ್ರಕಟಿಸಿದ ಇವರು “ಆಂಟಿ ಕ್ವೊರಮ್ ಸೆನ್ಸಿಂಗ್ ಅಂಡ್ ಆಂಟಿ ಬೈಯೋಫಿಲ್ಮ್ ಹೈಡ್ರೋಜೆಲ್ ಫಾರ್ ಟಾಪಿಕಲ್ ಅಪ್ಪ್ಲಿಕೆಶನ್ಸ್” ಎಂಬ ವಿಷಯದಲ್ಲಿ ಪೇಟೆಂಟ್ ಅನ್ನು ಹೊಂದಿದ್ದಾರೆ. ಜರ್ಮನಿಯ ಪ್ರತಿಷ್ಠಿತ ಪುರಸ್ಕಾರವಾದ EMBO ಪುರಸ್ಕಾರವೂ ಇವರಿಗೆ ಲಭಿಸಿದೆ. ಇವರು ಯುನೈಟೆಡ್ ಕಿಂಗ್ಡಮ್ ನ ಕೇಂಬ್ರಿಜ್ ಯೂನಿವರ್ಸಿಟಿ ಯಲ್ಲಿ 3 ತಿಂಗಳ ಕಾಲ ಪ್ರೊಫೆಸರ್ ಮಾರ್ಟಿನ್ ವೆಲ್ಚ್ ಅವರಿಗೆ ಸಹಯೋಗ ನೀಡಿರುತ್ತಾರೆ.


ಇವರು ಬಜಿರೆ ಹಲ್ಲಂದೋಡಿ ಶಶಿ ಕುಮಾರ್ ಇಂದ್ರ ಹಾಗೂ ಭಾರತೀ ದಂಪತಿಯ ಪುತ್ರ. ಪ್ರಸ್ತುತ ‘ಯೂನಿವರ್ಸಿಟಿ ಆಫ್ ಟೆಕ್ಸಾಸ್ ಅಟ್ ಟೈಲರ್’ ಅಮೇರಿಕಾದಲ್ಲಿ ಪೋಸ್ಟ್ ಡಾಕ್ಟೋರಲ್ ರಿಸರ್ಚ್ ಅಸೋಸಿಯೇಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಬುರುಡೆ ಪ್ರಕರಣ: ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

Suddi Udaya
error: Content is protected !!