July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

ಬೆಳ್ತಂಗಡಿ : ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸೆ.3 ರಂದು ನಡೆದ ಗ್ರಾಮ ಸಭೆಯಲ್ಲಿ ಕುಶಾಲಪ್ಪ ಗೌಡ ಹಾಗೂ ನವೀನ ಸಾಮಾನಿ ಬೆಂಬಲಿಗರ ನಡುವೆ ದೇವಸ್ಥಾನವೊಂದರ ಖರ್ಚು ವೆಚ್ಚಗಳ ಬಗ್ಗೆ ಮಾತಿನ ಚಕಮಕಿ ಹಾಗೂ ಎರಡು ತಂಡಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎರಡು ಕಡೆಯವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಂಬಾರು ನಿವಾಸಿ ಆನಂದ ಪೂಜಾರಿ, ಎಂಬವರು ನೀಡಿದ ದೂರಿನಲ್ಲಿ ನವೀನ ಸಾಮಾನಿ, ರಾಮ್ ಕುಮಾರ್, ಚಿಂಕು ಯಾನೆ ರವೀಂದ್ರ, ದಿನೇಶ್ ಹಾಗೂ ಪುರುಷೋತ್ತಮ ಎಂಬವರು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುತ್ತಾರೆ. ಈ ಸಮಯ ಗಲಾಟೆ ತಡೆಯಲು ಬಂದ ಮಹಿಳೆಯೋರ್ವರಿಗೂ ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 73/2024 ಕಲಂ : 352, 115(2), 74, 351(2) r/w 3(5) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.


ಪ್ರತಿದೂರು:
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಂಬಾರು ನಿವಾಸಿ ರವೀಂದ್ರ ಹಾಗೂ ರಾಮ್ ಕುಮಾರ್ ಅವರು ಪ್ರತಿ ದೂರು ನೀಡಿದ್ದು, ತಮಗೆ ಆರೋಪಿಗಳಾದ ಕುಶಾಲಪ್ಪ ಗೌಡ ಮತ್ತು ಆನಂದ ಪೂಜಾರಿ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುತ್ತಾರೆ ಎಂದು ಆರೋಪಿಸಿದ್ದಾರೆ. ಪ್ರತಿದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 74/2024 ಕಲಂ :, 118(1), 352 R/W 3(5) BNS-2023 ರಂತೆ ಪ್ರಕರಣ ದಾಖಲಿಸಲಾಗಿದೆ ಎರಡೂ ಪ್ರಕರಣಗಳ ತನಿಖೆ ನಡೆಯುತ್ತಿದೆ.

Related posts

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!