25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

ಬೆಳ್ತಂಗಡಿ : ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸೆ.3 ರಂದು ನಡೆದ ಗ್ರಾಮ ಸಭೆಯಲ್ಲಿ ಕುಶಾಲಪ್ಪ ಗೌಡ ಹಾಗೂ ನವೀನ ಸಾಮಾನಿ ಬೆಂಬಲಿಗರ ನಡುವೆ ದೇವಸ್ಥಾನವೊಂದರ ಖರ್ಚು ವೆಚ್ಚಗಳ ಬಗ್ಗೆ ಮಾತಿನ ಚಕಮಕಿ ಹಾಗೂ ಎರಡು ತಂಡಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎರಡು ಕಡೆಯವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಂಬಾರು ನಿವಾಸಿ ಆನಂದ ಪೂಜಾರಿ, ಎಂಬವರು ನೀಡಿದ ದೂರಿನಲ್ಲಿ ನವೀನ ಸಾಮಾನಿ, ರಾಮ್ ಕುಮಾರ್, ಚಿಂಕು ಯಾನೆ ರವೀಂದ್ರ, ದಿನೇಶ್ ಹಾಗೂ ಪುರುಷೋತ್ತಮ ಎಂಬವರು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುತ್ತಾರೆ. ಈ ಸಮಯ ಗಲಾಟೆ ತಡೆಯಲು ಬಂದ ಮಹಿಳೆಯೋರ್ವರಿಗೂ ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 73/2024 ಕಲಂ : 352, 115(2), 74, 351(2) r/w 3(5) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.


ಪ್ರತಿದೂರು:
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಂಬಾರು ನಿವಾಸಿ ರವೀಂದ್ರ ಹಾಗೂ ರಾಮ್ ಕುಮಾರ್ ಅವರು ಪ್ರತಿ ದೂರು ನೀಡಿದ್ದು, ತಮಗೆ ಆರೋಪಿಗಳಾದ ಕುಶಾಲಪ್ಪ ಗೌಡ ಮತ್ತು ಆನಂದ ಪೂಜಾರಿ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುತ್ತಾರೆ ಎಂದು ಆರೋಪಿಸಿದ್ದಾರೆ. ಪ್ರತಿದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 74/2024 ಕಲಂ :, 118(1), 352 R/W 3(5) BNS-2023 ರಂತೆ ಪ್ರಕರಣ ದಾಖಲಿಸಲಾಗಿದೆ ಎರಡೂ ಪ್ರಕರಣಗಳ ತನಿಖೆ ನಡೆಯುತ್ತಿದೆ.

Related posts

ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!