23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

ಬೆಳ್ತಂಗಡಿ : ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸೆ.3 ರಂದು ನಡೆದ ಗ್ರಾಮ ಸಭೆಯಲ್ಲಿ ಕುಶಾಲಪ್ಪ ಗೌಡ ಹಾಗೂ ನವೀನ ಸಾಮಾನಿ ಬೆಂಬಲಿಗರ ನಡುವೆ ದೇವಸ್ಥಾನವೊಂದರ ಖರ್ಚು ವೆಚ್ಚಗಳ ಬಗ್ಗೆ ಮಾತಿನ ಚಕಮಕಿ ಹಾಗೂ ಎರಡು ತಂಡಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎರಡು ಕಡೆಯವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಂಬಾರು ನಿವಾಸಿ ಆನಂದ ಪೂಜಾರಿ, ಎಂಬವರು ನೀಡಿದ ದೂರಿನಲ್ಲಿ ನವೀನ ಸಾಮಾನಿ, ರಾಮ್ ಕುಮಾರ್, ಚಿಂಕು ಯಾನೆ ರವೀಂದ್ರ, ದಿನೇಶ್ ಹಾಗೂ ಪುರುಷೋತ್ತಮ ಎಂಬವರು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುತ್ತಾರೆ. ಈ ಸಮಯ ಗಲಾಟೆ ತಡೆಯಲು ಬಂದ ಮಹಿಳೆಯೋರ್ವರಿಗೂ ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 73/2024 ಕಲಂ : 352, 115(2), 74, 351(2) r/w 3(5) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.


ಪ್ರತಿದೂರು:
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಂಬಾರು ನಿವಾಸಿ ರವೀಂದ್ರ ಹಾಗೂ ರಾಮ್ ಕುಮಾರ್ ಅವರು ಪ್ರತಿ ದೂರು ನೀಡಿದ್ದು, ತಮಗೆ ಆರೋಪಿಗಳಾದ ಕುಶಾಲಪ್ಪ ಗೌಡ ಮತ್ತು ಆನಂದ ಪೂಜಾರಿ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುತ್ತಾರೆ ಎಂದು ಆರೋಪಿಸಿದ್ದಾರೆ. ಪ್ರತಿದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 74/2024 ಕಲಂ :, 118(1), 352 R/W 3(5) BNS-2023 ರಂತೆ ಪ್ರಕರಣ ದಾಖಲಿಸಲಾಗಿದೆ ಎರಡೂ ಪ್ರಕರಣಗಳ ತನಿಖೆ ನಡೆಯುತ್ತಿದೆ.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ಫೆ.20 ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya
error: Content is protected !!