23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ನಾವೂರು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7, 8 ರಂದು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವೇ| ಮೂ| ಆನಂದ ಭಟ್ ರವರ ಪೌರೋಹಿತ್ಯದಲ್ಲಿ ಜರುಗಲಿದೆ.

ಸೆ.7 ರಂದು ಬೆಳಿಗ್ಗೆ 8.30 ಕ್ಕೆ ನಾವೂರು ಪೇಟೆಯಿಂದ ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ಭಜನೆ ಮೂಲಕ ಶ್ರೀ ಮಹಾಗಣಪತಿ ದೇವರ ಮೂರ್ತಿಯ ಮೆರವಣಿಗೆ ಮೂಲಕ ತರುವುದು. ಬೆಳಿಗ್ಗೆ 9ಕ್ಕೆ ಧ್ವಜಾರೋಹಣ, ಉತ್ಸವದ ಉದ್ಘಾಟನೆಯನ್ನು ರಾಘ್ನೇಶ್ ಸಾಲಿಯಾನ್ ನೆರವೇರಿಸಲಿದ್ದಾರೆ. ವಂದೇ ಮಾತರಂ ಪ್ರತಿಷ್ಠಾಪನೆ, ಗಣಹೋಮ, ಬೆಳಿಗ್ಗೆ 10 ಕ್ಕೆ ಭಜನಾ ಕಾರ್ಯಕ್ರಮ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಅಪರಾಹ್ನ 2.30ಕ್ಕೆ ಭಕ್ತಿಗೀತೆ ಮತ್ತು ವಂದೇ ಮಾತರಂ ಸ್ಪರ್ಧೆ, ಸಂಜೆ 6.30 ರಿಂದ ರಂಗಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ, ಸಂಜೆ 7.00ರಿಂದ ಪ್ರಖ್ಯಾತ ಹರಿಕಥಾ ಸಂಕೀರ್ತನಕಾರ ಆರ್ಯಭಟ ಪ್ರಶಸ್ತಿ ಪುರಸ್ಕೃತ ಕಲಾಸಾರಥಿ ತೋನ್ಸೆ ಪುಷ್ಕಳ ಕುಮಾರ್ ಇವರಿಂದ ಸ್ಯಮಂತಕೋಪಾಖ್ಯಾನ ಕಥಾ ಕೀರ್ತನ ನಡೆಯಲಿದೆ.

ಸೆ.8 ರಂದು ಬೆಳಿಗ್ಗೆ ಗಂಟೆ 9.00ಕ್ಕೆ ವಿವಿಧ ಭಜನಾ ತಂಡಗಳಿಂದ ಕಮ್ಮಟ ಭಜನೆ, ಬೆಳಿಗ್ಗೆ 11.00ಕ್ಕೆ ಧಾರ್ಮಿಕ ಸಭೆ ಹಾಗೂ ಕ್ರೀಡಾಕೂಟದ ಬಹುಮಾನ ವಿತರಣೆ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ರಂಗಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ, ಅಪರಾಹ್ನ 3 ರಿಮದ ಕುಣಿತ ಭಜನೆ ಹುಲಿವೇಷ ಕುಣಿತ, ಗೊಂಬೆ ಕುಣಿತ, ಸ್ತಬ್ಧ ಚಿತ್ರ ಸಹಿತ ಶ್ರೀ ಮಹಾಗಣಪತಿ ದೇವರ ಶೋಭಾಯಾತ್ರೆ ನಡೆಯಲಿದೆ.

Related posts

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

Suddi Udaya
error: Content is protected !!