25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

ಕೊಕ್ಕಡ : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಸೆ.4ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿ ರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ಕೃಷಿ ಇಲಾಖಾ ಅಧಿಕಾರಿ ರಂಜಿತ್ ಕುಮಾರ್ ರವರು ಗ್ರಾಮ ಸಭೆಯಲ್ಲಿ ಭಾಗವಹಿಸಿದ್ದರು.

ಕೊಕ್ಕಡದ ರಥಬೀದಿ, ನೆಲ್ಯಾಡಿ ಪುತ್ಯೆ, ಕೊಕ್ಕಡ, ಪಟ್ಟೂರು- ಪಟ್ರಮೆ ರಸ್ತೆಯು ಜಿಲ್ಲಾ ಪಂಚಾಯತ್ ಗೆ ಸಂಬಂಧ ಪಟ್ಟಿದ್ದು. ರಸ್ತೆಯ ಸಮಸ್ಯೆಗಳ ಬಗ್ಗೆ ಹಲವು ಸಮಯಗಳಿಂದ ಗ್ರಾಮ ಮಟ್ಟದ ಅಧಿಕಾರಿಗಳಲ್ಲಿ ಹೇಳಿ ಯಾವುದೇ ಪ್ರಯೋಜನವಾಗಿಲ್ಲ. ತಾಲೂಕು ಮಟ್ಟದ ಅಧಿಕಾರಿಗಳು ಬರಬೇಕು. ಹಾಗೂ ಗ್ರಾಮ ಸಭೆಗೆ ಪಿ ಡಬ್ಲ್ಯೂ ಡಿ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಗ್ರಾಮ ಸಭೆಯಲ್ಲಿ ಭಾಗವಹಿಸದೆ ಇರುವುದರಿಂದ ಗ್ರಾಮ ಸಭೆಯನ್ನು ನಡೆಸುವುದಕ್ಕೆ ಬಿಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

ಈ ಬಗ್ಗೆ ಗ್ರಾಮ ಪಂಚಾಯತ್ ಸದಸ್ಯ ಯೋಗೀಶ್ ಅಳಂಬಿಲ ಮಾತನಾಡಿ ಮುಂದಿನ ದಿನಗಳಲ್ಲಿ ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳನ್ನು ಕರಿಸಿ ಸಭೆಯನ್ನು ನಡೆಸುತ್ತೇವೆ ಎಂದು ಅಧ್ಯಕ್ಷರ ಮೇರೆಗೆ ಗ್ರಾಮ ಸಭೆಯನ್ನು ಮುಂದೂಡಿದರು.

ಸಭೆಯಲ್ಲಿ ಉಪಾಧ್ಯಕ್ಷ ಪ್ರಭಾಕರ ಗೌಡ, ಸದಸ್ಯರಾದ ಪವಿತ್ರಾ ಕೆ., ವಿಶ್ವನಾಥ ಮಲೆಕುಡಿಯ, ಲತಾ, ವಣಜಾಕ್ಷ ಆಚಾರ್ಯ, ಪುರುಷೋತ್ತಮ ಗೌಡ, ಜಗದೀಶ್ ಪೂಜಾರಿ, ಪ್ರಮೀಳಾ ಜಿ. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya
error: Content is protected !!