July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

ಉಜಿರೆ:ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘಟನೆಯ ಉನ್ನತ ಮಟ್ಟದ ಸಮಿತಿಯು 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಗಾಗಿ ಪ್ರಾಂಶುಪಾಲರಾಗಿ ಆಡಳಿತ ನಿರ್ವಹಣಾ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ. ಕುಮಾರ ಹೆಗ್ಡೆ ಅವರನ್ನು ಆಯ್ಕೆ ಮಾಡಿದೆ.

ಕಾಲೇಜಿನ ಪಠ್ಯ, ಪಠ್ಯೇತರ, ಸಾಂಸ್ಕೃತಿಕ, ಕ್ರೀಡಾ, ವಿಸ್ತರಣಾ ಹಾಗೂ ಸಂಶೋಧನಾ ಕ್ಷೇತ್ರಗಳ ಅಭಿವೃದ್ಧಿಗೆ ರಚನಾತ್ಮಕ ಚಟುವಟಿಕೆಗಳನ್ನು ಸಂಘಟಿಸಿದ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.

ಇದೇ ಸೆಪ್ಟೆಂಬರ್ 15 ರಂದು ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ಜರಗುವ ವಿಶೇಷ ಸಮಾರಂಭದಲ್ಲಿ ಖ್ಯಾತ ಶಿಕ್ಷಣ ತಜ್ಞರು, ರಾಷ್ಟ್ರೀಯ ಮೌಲ್ಯಾಂಕನ ಪರಿಷತ್(ನ್ಯಾಕ್) ನ ಅಧ್ಯಕ್ಷರಾದ ಡಾ. ಅನಿಲ್ ಸಹಸ್ರಬುದ್ಧೆ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.

Related posts

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಬೆಳ್ತಂಗಡಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳಿಗೆ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆಯಿಂದ ಉಚಿತ ಕಲಿಕಾ ಸಾಮಗ್ರಿಗಳ ವಿತರಣೆ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya
error: Content is protected !!