26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

ಉಜಿರೆ:ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘಟನೆಯ ಉನ್ನತ ಮಟ್ಟದ ಸಮಿತಿಯು 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಗಾಗಿ ಪ್ರಾಂಶುಪಾಲರಾಗಿ ಆಡಳಿತ ನಿರ್ವಹಣಾ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ. ಕುಮಾರ ಹೆಗ್ಡೆ ಅವರನ್ನು ಆಯ್ಕೆ ಮಾಡಿದೆ.

ಕಾಲೇಜಿನ ಪಠ್ಯ, ಪಠ್ಯೇತರ, ಸಾಂಸ್ಕೃತಿಕ, ಕ್ರೀಡಾ, ವಿಸ್ತರಣಾ ಹಾಗೂ ಸಂಶೋಧನಾ ಕ್ಷೇತ್ರಗಳ ಅಭಿವೃದ್ಧಿಗೆ ರಚನಾತ್ಮಕ ಚಟುವಟಿಕೆಗಳನ್ನು ಸಂಘಟಿಸಿದ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.

ಇದೇ ಸೆಪ್ಟೆಂಬರ್ 15 ರಂದು ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ಜರಗುವ ವಿಶೇಷ ಸಮಾರಂಭದಲ್ಲಿ ಖ್ಯಾತ ಶಿಕ್ಷಣ ತಜ್ಞರು, ರಾಷ್ಟ್ರೀಯ ಮೌಲ್ಯಾಂಕನ ಪರಿಷತ್(ನ್ಯಾಕ್) ನ ಅಧ್ಯಕ್ಷರಾದ ಡಾ. ಅನಿಲ್ ಸಹಸ್ರಬುದ್ಧೆ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.

Related posts

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿದ ‘ಆಸರೆ’ – ಕುಂಭಶ್ರೀ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆಗೆ ಅಭೂತಪೂರ್ವ ಸ್ಪಂದನೆ

Suddi Udaya

ಮಡಂತ್ಯಾರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

Suddi Udaya
error: Content is protected !!