ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಕಡಿರುದ್ಯಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಇದರ ವತಿಯಿಂದ ಮುಂಡಾಜೆ ವಲಯದ ಕಡಿರುದ್ಯಾವರ ಕಾರ್ಯಕ್ಷೇತ್ರದಲ್ಲಿರುವ ಕುಕ್ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ಧನ ಶಾಲಾ ಮುಖ್ಯ ಅಧ್ಯಾಪಕರಾದ ನಾಗಪ್ಪ ಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಬೇಬಿ ಹಾಗೂ ಸಹ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಬಟ್ಟಲು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ನಾರಾಯಣ ಕುಂಬಾರ, ಸುರೇಶ್ ಪೂಜಾರಿ, ಗ್ರಾ ಪಂ ಸದಸ್ಯರಾದ ರಾಮಣ್ಣ ಕುಂಬಾರ, ಶೌರ್ಯ ಪ್ರತಿನಿಧಿ ಲೋಕೇಶ್, ಸೇವಾಪ್ರತಿನಿಧಿ ರಶ್ಮಿ ಉಪಸ್ಥಿತರಿದ್ದರು.

Leave a Comment

error: Content is protected !!