ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ಬೆಳ್ತಂಗಡಿ : ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂಡಳಿ ವತಿಯಿಂದ ವಾರ್ಷಿಕ ಕೃಷ್ಣ ಜನ್ಮಾಷ್ಠಮಿ, ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ಹಾಗೂ ಭಜನಾ ಕಾರ್ಯಕ್ರಮ ಮತ್ತು ವಿವಿಧ ಆಟೋಟ ಸ್ಪರ್ಧೆ ಇತ್ತೀಚೆಗೆ ಭಜನಾ ಮಂಡಳಿ ವಠಾರದಲ್ಲಿ ಜರಗಿತು.


ಅಷ್ಠಮಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ, ಕಾರ್ಯದರ್ಶಿ ಗುಲಾಬಿ, ಕೋಶಾಧಿಕಾರಿ ರೇವತಿ ಶೆಟ್ಟಿ, ಶ್ರೀ ಕೃಷ್ಣ ಮಹಿಳಾ ಸೇವಾ ಟ್ರಸ್ಟಿ ಅಧ್ಯಕ್ಷೆ ದೇವಕಿ, ಕಾರ್ಯದರ್ಶಿ ವಿಮಲಾಕ್ಷಿ ,ಜೊತೆ ಕಾರ್ಯದರ್ಶಿ ರೇಖಾ ರಾಘವ, ಕೋಶಾಧಿಕಾರಿ ಯಶವಂತಿ ಸತೀಶ್ ಹಾಗೂ ಸಂಘದ ಸದಸ್ಯರು, ಸಾರ್ವಜನಿಕರು ಭಾಗವಹಿಸಿದರು.

ವಿಠ್ಠಲ ಶೆಟ್ಟಿ ಉಪ್ಪಡ್ಕ,ಸತೀಶ್ ಭಂಡಾರಿ ,ರಾಜೇಶ್ ಶೆಟ್ಟಿ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟಿದ್ದಾರೆ. ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

Leave a Comment

error: Content is protected !!