25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

ತೆಂಕಕಾರಂದೂರು : ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ. ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಪೋಷಕರಿಗೆ ವಿಶೇಷ ಉಚಿತ ತರಬೇತಿ ಶಿಬಿರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಎಸ್ .ಡಿ. ಎಂ. ಸಿ. ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೊಟ್ಟಿ ಉದ್ಘಾಟಿಸಿದರು. ವೇದಿಕೆಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ಲಯನ್ ಕಿರಣ್ ಶೆಟ್ಟಿ, ಪೆರೋಡಿತ್ತಾಯಕಟ್ಟೆ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಪಸ್ಥಿತರಿದ್ದರು.


ತರಬೇತಿಯನ್ನು ಲಯನ್ ಸುರೇಶ್ ಎಂ.ಎಸ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ವಿವಿಧ ರೀತಿಯಲ್ಲಿ ಸಿಗುವ ವಿದ್ಯಾರ್ಥಿ ವೇತನಗಳ ಬಗ್ಗೆ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ನಜೀರ್ ರವರು ಮಾಹಿತಿ ನೀಡಿದರು. ಶಾಲಾ ಮಕ್ಕಳು ಪ್ರಾರ್ಥಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಬೆನಡಿಕ್ಟಾ ಪಾಯ್ಸ್ ರವರು ಪ್ರಾಸ್ತವಿಕವಾಗಿ ಮಾತನಾಡಿ, ಬಂದ ಅತಿಥಿಗಳನ್ನು ಸ್ವಾಗತಿಸಿ, ಶಾಲಾ ಶಿಕ್ಷಕಿ ಶ್ರೀಮತಿ ಚೈತ್ರರವರು ಧನ್ಯವಾದವಿತ್ತರು.

ಈ ಕಾರ್ಯಗಾರದಲ್ಲಿ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸದಸ್ಯರು,
ಶಾಲಾ ಶಿಕ್ಷಕ ವೃಂದದವರು, ಬಿಸಿಯೂಟ ಸಿಬ್ಬಂದಿಯವರು ಪುಟಾಣಿಗಳು ಸಹಕರಿಸಿದರು.

Related posts

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!