24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

ಬೆಳ್ತಂಗಡಿ: ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ ನಡೆಸಿ ಬಾಂಗ್ಲಾದೇಶ ಮೂಲದ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ರಕ್ಷಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು, ಬೆಳ್ತಂಗಡಿ ಮೂಲದ ಸಾಫ್ಟ್‌ವೇ‌ರ್ ಇಂಜಿನಿಯರ್ ಯುವಕನ ಸಹಿತ ಮೂವರನ್ನು ಬಂಧಿಸಿದ ಘಟನೆ ನಡೆದಿದೆ.

ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ನಿವಾಸಿ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿದ್ದ ಟೆಕ್ಕಿ ಸುಬ್ರಹ್ಮಣ್ಯ ಶಾಸ್ತ್ರಿ, ಬೆಂಗಳೂರಿನ ಹೊಂಗಸಂದ್ರದ ಕರಿಷ್ಮಾ ಶೇಖ್ ಅಲಿಯಾಸ್ ಮುಸ್ಕಾನ್ (23) ಹಾಗೂ ಬೆಂಗಳೂರಿನ ಶಾಂತಿಪುರದ ಸೂರಜ್ ಸಾಹಜೀ(26) ಬಂಧಿತರು.

ಕರಿಷ್ಮಾ ಹಾಗೂ ಸೂರಜ್ ಪಶ್ಚಿಮ ಬಂಗಾಳದವರಾಗಿದ್ದು, ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಉದ್ಯೋಗದ ನೆಪದಲ್ಲಿ ಬಂದು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಅದಕ್ಕಾಗಿ ಗೋವಿಂದಪುರದಲ್ಲಿ ಮನೆ ಬಾಡಿಗೆಗೆ ಪಡೆದು ದಂಧೆ ನಡೆಸುತ್ತಿದ್ದರು. ದಂಧೆಗೆ ಬಾಂಗ್ಲಾದೇಶದ 15 ಮತ್ತು 16 ವರ್ಷದ ಇಬ್ಬರು ಬಾಲಕಿಯರನ್ನು ಆರೋಪಿಗಳು ಕರೆತಂದಿದ್ದು, ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಆ.30ರಂದು ದಾಳಿ ನಡೆಸಿದ್ದರು. ಬಂಧಿತರ ಪೈಕಿ ಕರಿಷ್ಮಾ ಬಾಂಗ್ಲಾದೇಶದ ಮೂಲದವಳಾಗಿರುವ ಶಂಕೆಯಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ.

ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ವೇಶ್ಯಾವಾಟಿಕೆ ಅಡ್ಡೆಗೆ ಗ್ರಾಹಕನಾಗಿ ಹೋಗಿದ್ದ. ಇದೇ ವೇಳೆ ಪೊಲೀಸ್ ದಾಳಿ ನಡೆದಿದ್ದು, ಸಿಕ್ಕಿಬಿದ್ದಿದ್ದಾನೆ. ವಿಚಾರಣೆ ವೇಳೆ ತಾನು ಈ ಮನೆಗೆ ಬರುತ್ತಿರುವುದು ಇದು ಎರಡನೇ ಬಾರಿ ಎಂದು ಹೇಳಿಕೊಂಡಿದ್ದಾನೆ. ಸಾಫ್ಟ್‌ವೇರ್ ಉದ್ಯೋಗಿಯಾಗಿರುವ ಸುಬ್ರಹ್ಮಣ್ಯ ಶಾಸ್ತ್ರಿ ದಂಧೆಕೋರರಲ್ಲಿ ಬಾಲಕಿಯರು ಬೇಕು ಎಂದು ಬೇಡಿಕೆ ಇಟ್ಟಿದ್ದ. ಅದರಂತೆ ಇಬ್ಬರು ಆರೋಪಿಗಳು ಬಾಲಕಿಯರನ್ನು ಕರೆತಂದಿದ್ದರು. ಬಳಿಕ ಹೊಂಗಸಂದ್ರದ ಬಾಡಿಗೆ ಮನೆಯಲ್ಲಿ ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಆರೋಪಿಗಳ ವಿರುದ್ಧ ಬೊಮ್ಮನಹಳ್ಳಿ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ|ಚಂದ್ರಗುಪ್ತ ತಿಳಿಸಿದ್ದಾರೆ.

Related posts

ನಿವೃತ್ತ ಸಾಧಕ ಯೋಧ ಪ್ರಶಸ್ತಿ ಸ್ವೀಕರಿಸಿ ಆಗಮಿಸಿದ ಲ| ಡಾ.ಗೋಪಾಲಕೃಷ್ಣ ಕಾಂಚೋಡು: ಉಜಿರೆಯಲ್ಲಿ ಭವ್ಯವಾದ ಸ್ವಾಗತ – ಅಭಿನಂದನೆ

Suddi Udaya

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
error: Content is protected !!