July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

ಬೆಳ್ತಂಗಡಿ : ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸೆ.3 ರಂದು ನಡೆದ ಗ್ರಾಮ ಸಭೆಯಲ್ಲಿ ಕುಶಾಲಪ್ಪ ಗೌಡ ಹಾಗೂ ನವೀನ ಸಾಮಾನಿ ಬೆಂಬಲಿಗರ ನಡುವೆ ದೇವಸ್ಥಾನವೊಂದರ ಖರ್ಚು ವೆಚ್ಚಗಳ ಬಗ್ಗೆ ಮಾತಿನ ಚಕಮಕಿ ಹಾಗೂ ಎರಡು ತಂಡಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎರಡು ಕಡೆಯವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಂಬಾರು ನಿವಾಸಿ ಆನಂದ ಪೂಜಾರಿ, ಎಂಬವರು ನೀಡಿದ ದೂರಿನಲ್ಲಿ ನವೀನ ಸಾಮಾನಿ, ರಾಮ್ ಕುಮಾರ್, ಚಿಂಕು ಯಾನೆ ರವೀಂದ್ರ, ದಿನೇಶ್ ಹಾಗೂ ಪುರುಷೋತ್ತಮ ಎಂಬವರು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುತ್ತಾರೆ. ಈ ಸಮಯ ಗಲಾಟೆ ತಡೆಯಲು ಬಂದ ಮಹಿಳೆಯೋರ್ವರಿಗೂ ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 73/2024 ಕಲಂ : 352, 115(2), 74, 351(2) r/w 3(5) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.


ಪ್ರತಿದೂರು:
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಂಬಾರು ನಿವಾಸಿ ರವೀಂದ್ರ ಹಾಗೂ ರಾಮ್ ಕುಮಾರ್ ಅವರು ಪ್ರತಿ ದೂರು ನೀಡಿದ್ದು, ತಮಗೆ ಆರೋಪಿಗಳಾದ ಕುಶಾಲಪ್ಪ ಗೌಡ ಮತ್ತು ಆನಂದ ಪೂಜಾರಿ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುತ್ತಾರೆ ಎಂದು ಆರೋಪಿಸಿದ್ದಾರೆ. ಪ್ರತಿದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 74/2024 ಕಲಂ :, 118(1), 352 R/W 3(5) BNS-2023 ರಂತೆ ಪ್ರಕರಣ ದಾಖಲಿಸಲಾಗಿದೆ ಎರಡೂ ಪ್ರಕರಣಗಳ ತನಿಖೆ ನಡೆಯುತ್ತಿದೆ.

Related posts

ಅ.24 ಸೌತಡ್ಕದಲ್ಲಿ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ: ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ

Suddi Udaya

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

Suddi Udaya

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya

ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ

Suddi Udaya

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!