September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಊಟದ ತಟ್ಟೆ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದಿಂದ ಮಂಜೂರಾಗಿರುವ ಸುಮಾರು 320 ಊಟದ ತಟ್ಟೆಗಳನ್ನು ಮಕ್ಕಳಿಗೆ ವಿತರಣೆ ಮಾಡಲಾಯಿತು. .ಶಾಲಾ ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ ಪುತ್ತೂರಾಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ವೈಖರಿ ಬಗ್ಗೆ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು ಮತ್ತು ತಮ್ಮ ಶಾಲೆಗೆ ನೀಡಿದ ಕೊಡುಗೆ ಬಗ್ಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ , ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ,ಎಸ್.ಡಿ.ಎಮ್.ಸಿ ಅಧ್ಯಕ್ಷರು ಹಾಗೂ ಬೆಳ್ತಂಗಡಿ ಬಿ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರು ಆದಂತಹ ಚರಣ್ ಕುಮಾರ್ ,ಹುಣ್ಸೆಕಟ್ಟೆ ಒಕ್ಕೂಟದ ಅಧ್ಯಕ್ಷರಾದ ದಯಾನಂದ ಕೋಟ್ಯಾನ್, ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷರಾದ ಲಕ್ಷ್ಮಣ ಪಿ ಮತ್ತು ಸೇವಾ ಪ್ರತಿನಿಧಿ ಜ್ಯೋತಿ ಹಾಗೂ ಶಾಲಾ ಶಿಕ್ಷಕರ ವೃಂದ ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya

‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ಗೆ ಶಿಕ್ಷಕಿ ಪವಿತ್ರಾ ದಿನೇಶ್ ಕೊಕ್ಕಡ ಆಯ್ಕೆ

Suddi Udaya
error: Content is protected !!