24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ನಾವೂರು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7, 8 ರಂದು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವೇ| ಮೂ| ಆನಂದ ಭಟ್ ರವರ ಪೌರೋಹಿತ್ಯದಲ್ಲಿ ಜರುಗಲಿದೆ.

ಸೆ.7 ರಂದು ಬೆಳಿಗ್ಗೆ 8.30 ಕ್ಕೆ ನಾವೂರು ಪೇಟೆಯಿಂದ ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ಭಜನೆ ಮೂಲಕ ಶ್ರೀ ಮಹಾಗಣಪತಿ ದೇವರ ಮೂರ್ತಿಯ ಮೆರವಣಿಗೆ ಮೂಲಕ ತರುವುದು. ಬೆಳಿಗ್ಗೆ 9ಕ್ಕೆ ಧ್ವಜಾರೋಹಣ, ಉತ್ಸವದ ಉದ್ಘಾಟನೆಯನ್ನು ರಾಘ್ನೇಶ್ ಸಾಲಿಯಾನ್ ನೆರವೇರಿಸಲಿದ್ದಾರೆ. ವಂದೇ ಮಾತರಂ ಪ್ರತಿಷ್ಠಾಪನೆ, ಗಣಹೋಮ, ಬೆಳಿಗ್ಗೆ 10 ಕ್ಕೆ ಭಜನಾ ಕಾರ್ಯಕ್ರಮ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಅಪರಾಹ್ನ 2.30ಕ್ಕೆ ಭಕ್ತಿಗೀತೆ ಮತ್ತು ವಂದೇ ಮಾತರಂ ಸ್ಪರ್ಧೆ, ಸಂಜೆ 6.30 ರಿಂದ ರಂಗಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ, ಸಂಜೆ 7.00ರಿಂದ ಪ್ರಖ್ಯಾತ ಹರಿಕಥಾ ಸಂಕೀರ್ತನಕಾರ ಆರ್ಯಭಟ ಪ್ರಶಸ್ತಿ ಪುರಸ್ಕೃತ ಕಲಾಸಾರಥಿ ತೋನ್ಸೆ ಪುಷ್ಕಳ ಕುಮಾರ್ ಇವರಿಂದ ಸ್ಯಮಂತಕೋಪಾಖ್ಯಾನ ಕಥಾ ಕೀರ್ತನ ನಡೆಯಲಿದೆ.

ಸೆ.8 ರಂದು ಬೆಳಿಗ್ಗೆ ಗಂಟೆ 9.00ಕ್ಕೆ ವಿವಿಧ ಭಜನಾ ತಂಡಗಳಿಂದ ಕಮ್ಮಟ ಭಜನೆ, ಬೆಳಿಗ್ಗೆ 11.00ಕ್ಕೆ ಧಾರ್ಮಿಕ ಸಭೆ ಹಾಗೂ ಕ್ರೀಡಾಕೂಟದ ಬಹುಮಾನ ವಿತರಣೆ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ರಂಗಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ, ಅಪರಾಹ್ನ 3 ರಿಮದ ಕುಣಿತ ಭಜನೆ ಹುಲಿವೇಷ ಕುಣಿತ, ಗೊಂಬೆ ಕುಣಿತ, ಸ್ತಬ್ಧ ಚಿತ್ರ ಸಹಿತ ಶ್ರೀ ಮಹಾಗಣಪತಿ ದೇವರ ಶೋಭಾಯಾತ್ರೆ ನಡೆಯಲಿದೆ.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!