25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ನಾವೂರು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7, 8 ರಂದು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವೇ| ಮೂ| ಆನಂದ ಭಟ್ ರವರ ಪೌರೋಹಿತ್ಯದಲ್ಲಿ ಜರುಗಲಿದೆ.

ಸೆ.7 ರಂದು ಬೆಳಿಗ್ಗೆ 8.30 ಕ್ಕೆ ನಾವೂರು ಪೇಟೆಯಿಂದ ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ಭಜನೆ ಮೂಲಕ ಶ್ರೀ ಮಹಾಗಣಪತಿ ದೇವರ ಮೂರ್ತಿಯ ಮೆರವಣಿಗೆ ಮೂಲಕ ತರುವುದು. ಬೆಳಿಗ್ಗೆ 9ಕ್ಕೆ ಧ್ವಜಾರೋಹಣ, ಉತ್ಸವದ ಉದ್ಘಾಟನೆಯನ್ನು ರಾಘ್ನೇಶ್ ಸಾಲಿಯಾನ್ ನೆರವೇರಿಸಲಿದ್ದಾರೆ. ವಂದೇ ಮಾತರಂ ಪ್ರತಿಷ್ಠಾಪನೆ, ಗಣಹೋಮ, ಬೆಳಿಗ್ಗೆ 10 ಕ್ಕೆ ಭಜನಾ ಕಾರ್ಯಕ್ರಮ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಅಪರಾಹ್ನ 2.30ಕ್ಕೆ ಭಕ್ತಿಗೀತೆ ಮತ್ತು ವಂದೇ ಮಾತರಂ ಸ್ಪರ್ಧೆ, ಸಂಜೆ 6.30 ರಿಂದ ರಂಗಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ, ಸಂಜೆ 7.00ರಿಂದ ಪ್ರಖ್ಯಾತ ಹರಿಕಥಾ ಸಂಕೀರ್ತನಕಾರ ಆರ್ಯಭಟ ಪ್ರಶಸ್ತಿ ಪುರಸ್ಕೃತ ಕಲಾಸಾರಥಿ ತೋನ್ಸೆ ಪುಷ್ಕಳ ಕುಮಾರ್ ಇವರಿಂದ ಸ್ಯಮಂತಕೋಪಾಖ್ಯಾನ ಕಥಾ ಕೀರ್ತನ ನಡೆಯಲಿದೆ.

ಸೆ.8 ರಂದು ಬೆಳಿಗ್ಗೆ ಗಂಟೆ 9.00ಕ್ಕೆ ವಿವಿಧ ಭಜನಾ ತಂಡಗಳಿಂದ ಕಮ್ಮಟ ಭಜನೆ, ಬೆಳಿಗ್ಗೆ 11.00ಕ್ಕೆ ಧಾರ್ಮಿಕ ಸಭೆ ಹಾಗೂ ಕ್ರೀಡಾಕೂಟದ ಬಹುಮಾನ ವಿತರಣೆ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ರಂಗಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ, ಅಪರಾಹ್ನ 3 ರಿಮದ ಕುಣಿತ ಭಜನೆ ಹುಲಿವೇಷ ಕುಣಿತ, ಗೊಂಬೆ ಕುಣಿತ, ಸ್ತಬ್ಧ ಚಿತ್ರ ಸಹಿತ ಶ್ರೀ ಮಹಾಗಣಪತಿ ದೇವರ ಶೋಭಾಯಾತ್ರೆ ನಡೆಯಲಿದೆ.

Related posts

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!