25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಶಿಕ್ಷಕರಿಗೆ ಸನ್ಮಾನ ಮಾಡುವ ಮೂಲಕ ಸೆ.4ರಂದು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಮಂಡಲದ ಮಾಜಿ ಅಧ್ಯಕ್ಷ ಕುಶಾಲಪ್ಪ ಗೌಡ ಭಾಗವಹಿಸಿ ಮೋರ್ಚದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ಹಾಗೂ ಮಹಿಳಾ ಮೋರ್ಚಾದ ಪ್ರಭಾರಿಗಳಾದ ಜಯಾನಂದ ಗೌಡ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ಉಮಾ ರಾವ್, ಶ್ರೀಮತಿ ರಾಜೇಶ್ವರಿ, ಶ್ರೀಮತಿ ಸುಧಾ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಶ್ರೀಮತಿ ಶಶಿಕಲಾ, ಶ್ರೀಮತಿ ಚಂಚಲಾಕ್ಷಿ, ಶ್ರೀಮತಿ ಸಂಗೀತ ಶೆಟ್ಟಿ, ಶ್ರೀಮತಿ ಮಂಜುಳಾ, ಶ್ರೀಮತಿ ವೀಣಾ, ವಿನೋದ, ಶ್ರೀಮತಿ ರಶ್ಮಿ ಪಟವರ್ಧನ್, ಶ್ರೀಮತಿ ಆಶಾಲತಾ ಲಾಯಿಲ, ಶ್ರೀಮತಿ ಪುಷ್ಪ ಕರಿಮಣಿಯಲು ಉಪಸ್ಥಿತರಿದ್ದರು.

ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ತುಳಸಿ ಮಾಲಾಡಿ ಸ್ವಾಗತಿಸಿ, ನಿರೂಪಿಸಿ, ಪೂರ್ಣಿಮಾ ಜಯಂತ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya
error: Content is protected !!