September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

ವೇಣೂರು: ಡಾ. ಸುಕೇಶ್ ಕುಮಾರ್ ಬಜಿರೆ ಇವರು ಡಾ. ರಾಜೇಶ್ ಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ರೋಲ್ ಆಫ್ ಕ್ವೊರಮ್ ಸೆನ್ಸಿಂಗ್ ಇನ್ ಸುಡೋಮೋನಾಸ್ ಅರಜಿನೋಸ ಅಡಾಪ್ಟ್ಯೇಷನ್ ಡ್ಯೂರಿಂಗ್ ಕ್ರಾನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್” ಎಂಬ ಮಹಾಪ್ರಬಂಧಕ್ಕೆ ದೇರಳಕಟ್ಟೆಯ ಯೇನೆಪೊಯ ಪರಿಗಣಿತ ವಿಶ್ವವಿದ್ಯಾನಿಲಯವು ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿಯನ್ನು ನೀಡಿ ಗೌರವಿಸಿದೆ.


25ಕ್ಕೂ ಮೀರಿದ ರಿಸರ್ಚ್ ಪೇಪರ್ ಗಳನ್ನು ಇಂಟರ್ನ್ಯಾಷನಲ್ ಜರ್ನಲ್ ಗಳಲ್ಲಿ ಪ್ರಕಟಿಸಿದ ಇವರು “ಆಂಟಿ ಕ್ವೊರಮ್ ಸೆನ್ಸಿಂಗ್ ಅಂಡ್ ಆಂಟಿ ಬೈಯೋಫಿಲ್ಮ್ ಹೈಡ್ರೋಜೆಲ್ ಫಾರ್ ಟಾಪಿಕಲ್ ಅಪ್ಪ್ಲಿಕೆಶನ್ಸ್” ಎಂಬ ವಿಷಯದಲ್ಲಿ ಪೇಟೆಂಟ್ ಅನ್ನು ಹೊಂದಿದ್ದಾರೆ. ಜರ್ಮನಿಯ ಪ್ರತಿಷ್ಠಿತ ಪುರಸ್ಕಾರವಾದ EMBO ಪುರಸ್ಕಾರವೂ ಇವರಿಗೆ ಲಭಿಸಿದೆ. ಇವರು ಯುನೈಟೆಡ್ ಕಿಂಗ್ಡಮ್ ನ ಕೇಂಬ್ರಿಜ್ ಯೂನಿವರ್ಸಿಟಿ ಯಲ್ಲಿ 3 ತಿಂಗಳ ಕಾಲ ಪ್ರೊಫೆಸರ್ ಮಾರ್ಟಿನ್ ವೆಲ್ಚ್ ಅವರಿಗೆ ಸಹಯೋಗ ನೀಡಿರುತ್ತಾರೆ.


ಇವರು ಬಜಿರೆ ಹಲ್ಲಂದೋಡಿ ಶಶಿ ಕುಮಾರ್ ಇಂದ್ರ ಹಾಗೂ ಭಾರತೀ ದಂಪತಿಯ ಪುತ್ರ. ಪ್ರಸ್ತುತ ‘ಯೂನಿವರ್ಸಿಟಿ ಆಫ್ ಟೆಕ್ಸಾಸ್ ಅಟ್ ಟೈಲರ್’ ಅಮೇರಿಕಾದಲ್ಲಿ ಪೋಸ್ಟ್ ಡಾಕ್ಟೋರಲ್ ರಿಸರ್ಚ್ ಅಸೋಸಿಯೇಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya
error: Content is protected !!