23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

ಬೆಳ್ತಂಗಡಿ : ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸೆ.3 ರಂದು ನಡೆದ ಗ್ರಾಮ ಸಭೆಯಲ್ಲಿ ಕುಶಾಲಪ್ಪ ಗೌಡ ಹಾಗೂ ನವೀನ ಸಾಮಾನಿ ಬೆಂಬಲಿಗರ ನಡುವೆ ದೇವಸ್ಥಾನವೊಂದರ ಖರ್ಚು ವೆಚ್ಚಗಳ ಬಗ್ಗೆ ಮಾತಿನ ಚಕಮಕಿ ಹಾಗೂ ಎರಡು ತಂಡಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎರಡು ಕಡೆಯವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಂಬಾರು ನಿವಾಸಿ ಆನಂದ ಪೂಜಾರಿ, ಎಂಬವರು ನೀಡಿದ ದೂರಿನಲ್ಲಿ ನವೀನ ಸಾಮಾನಿ, ರಾಮ್ ಕುಮಾರ್, ಚಿಂಕು ಯಾನೆ ರವೀಂದ್ರ, ದಿನೇಶ್ ಹಾಗೂ ಪುರುಷೋತ್ತಮ ಎಂಬವರು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುತ್ತಾರೆ. ಈ ಸಮಯ ಗಲಾಟೆ ತಡೆಯಲು ಬಂದ ಮಹಿಳೆಯೋರ್ವರಿಗೂ ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 73/2024 ಕಲಂ : 352, 115(2), 74, 351(2) r/w 3(5) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.


ಪ್ರತಿದೂರು:
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಂಬಾರು ನಿವಾಸಿ ರವೀಂದ್ರ ಹಾಗೂ ರಾಮ್ ಕುಮಾರ್ ಅವರು ಪ್ರತಿ ದೂರು ನೀಡಿದ್ದು, ತಮಗೆ ಆರೋಪಿಗಳಾದ ಕುಶಾಲಪ್ಪ ಗೌಡ ಮತ್ತು ಆನಂದ ಪೂಜಾರಿ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುತ್ತಾರೆ ಎಂದು ಆರೋಪಿಸಿದ್ದಾರೆ. ಪ್ರತಿದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 74/2024 ಕಲಂ :, 118(1), 352 R/W 3(5) BNS-2023 ರಂತೆ ಪ್ರಕರಣ ದಾಖಲಿಸಲಾಗಿದೆ ಎರಡೂ ಪ್ರಕರಣಗಳ ತನಿಖೆ ನಡೆಯುತ್ತಿದೆ.

Related posts

ನಾವೂರು :ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಲಿಕ ನಿಷೇಧ

Suddi Udaya
error: Content is protected !!