July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

ಬೆಳ್ತಂಗಡಿ : ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸೆ.3 ರಂದು ನಡೆದ ಗ್ರಾಮ ಸಭೆಯಲ್ಲಿ ಕುಶಾಲಪ್ಪ ಗೌಡ ಹಾಗೂ ನವೀನ ಸಾಮಾನಿ ಬೆಂಬಲಿಗರ ನಡುವೆ ದೇವಸ್ಥಾನವೊಂದರ ಖರ್ಚು ವೆಚ್ಚಗಳ ಬಗ್ಗೆ ಮಾತಿನ ಚಕಮಕಿ ಹಾಗೂ ಎರಡು ತಂಡಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎರಡು ಕಡೆಯವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಂಬಾರು ನಿವಾಸಿ ಆನಂದ ಪೂಜಾರಿ, ಎಂಬವರು ನೀಡಿದ ದೂರಿನಲ್ಲಿ ನವೀನ ಸಾಮಾನಿ, ರಾಮ್ ಕುಮಾರ್, ಚಿಂಕು ಯಾನೆ ರವೀಂದ್ರ, ದಿನೇಶ್ ಹಾಗೂ ಪುರುಷೋತ್ತಮ ಎಂಬವರು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುತ್ತಾರೆ. ಈ ಸಮಯ ಗಲಾಟೆ ತಡೆಯಲು ಬಂದ ಮಹಿಳೆಯೋರ್ವರಿಗೂ ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 73/2024 ಕಲಂ : 352, 115(2), 74, 351(2) r/w 3(5) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.


ಪ್ರತಿದೂರು:
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಂಬಾರು ನಿವಾಸಿ ರವೀಂದ್ರ ಹಾಗೂ ರಾಮ್ ಕುಮಾರ್ ಅವರು ಪ್ರತಿ ದೂರು ನೀಡಿದ್ದು, ತಮಗೆ ಆರೋಪಿಗಳಾದ ಕುಶಾಲಪ್ಪ ಗೌಡ ಮತ್ತು ಆನಂದ ಪೂಜಾರಿ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುತ್ತಾರೆ ಎಂದು ಆರೋಪಿಸಿದ್ದಾರೆ. ಪ್ರತಿದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 74/2024 ಕಲಂ :, 118(1), 352 R/W 3(5) BNS-2023 ರಂತೆ ಪ್ರಕರಣ ದಾಖಲಿಸಲಾಗಿದೆ ಎರಡೂ ಪ್ರಕರಣಗಳ ತನಿಖೆ ನಡೆಯುತ್ತಿದೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!