23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಊಟದ ತಟ್ಟೆ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದಿಂದ ಮಂಜೂರಾಗಿರುವ ಸುಮಾರು 320 ಊಟದ ತಟ್ಟೆಗಳನ್ನು ಮಕ್ಕಳಿಗೆ ವಿತರಣೆ ಮಾಡಲಾಯಿತು. .ಶಾಲಾ ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ ಪುತ್ತೂರಾಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ವೈಖರಿ ಬಗ್ಗೆ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು ಮತ್ತು ತಮ್ಮ ಶಾಲೆಗೆ ನೀಡಿದ ಕೊಡುಗೆ ಬಗ್ಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ , ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ,ಎಸ್.ಡಿ.ಎಮ್.ಸಿ ಅಧ್ಯಕ್ಷರು ಹಾಗೂ ಬೆಳ್ತಂಗಡಿ ಬಿ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರು ಆದಂತಹ ಚರಣ್ ಕುಮಾರ್ ,ಹುಣ್ಸೆಕಟ್ಟೆ ಒಕ್ಕೂಟದ ಅಧ್ಯಕ್ಷರಾದ ದಯಾನಂದ ಕೋಟ್ಯಾನ್, ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷರಾದ ಲಕ್ಷ್ಮಣ ಪಿ ಮತ್ತು ಸೇವಾ ಪ್ರತಿನಿಧಿ ಜ್ಯೋತಿ ಹಾಗೂ ಶಾಲಾ ಶಿಕ್ಷಕರ ವೃಂದ ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!