July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ.) ದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ವಹಿಸಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿ ಬಾಯಿ ಪುಲೆ ಅವರುಗಳ ಕೊಡುಗೆಯನ್ನು ಸ್ಮರಿಸುತ್ತಾ, ಶಿಕ್ಷಕರು ಸಮಯ ಬದ್ಧತೆ, ವಿಷಯ ಬದ್ಧತೆ, ಭಾಷಾ ಬದ್ಧತೆ ಹಾಗೂ ಶಾಲಾ ಬದ್ಧತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಉಪನ್ಯಾಸಕರಾದ ಶ್ರೀಮತಿ ಅನುಷಾ ಡಿ. ಜೆ ಹಾಗೂ ಪ್ರಶಿಕ್ಷಣಾರ್ಥಿ ದೀಕ್ಷಿತ್ ಶಿಕ್ಷಕರ ದಿನದ ವಿಶೇಷದ ಕುರಿತು ಮಾತನಾಡಿದರು. ಶಿಕ್ಷಕರ ಕುರಿತಾಗಿ ಪ್ರಶಿಕ್ಷಣಾರ್ಥಿಗಳು ಸಮೂಹ ಗಾಯನವನ್ನು ಹಾಡಿದರು ಹಾಗೂ ಪ್ರಶಿಕ್ಷಣಾರ್ಥಿ ಜಾಸ್ಮಿನ್ ರೇಶ್ಮಾ ಕ್ರಾಸ್ತ ಸ್ವರಚಿತ ಕವನವನ್ನು ವಾಚಿಸಿದರು. ಕಾಲೇಜಿನ ಉಪನ್ಯಾಸಕ ವೃಂದದವರಿಗೆ ಮನರಂಜನಾ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವಿದ್ಯಾಶ್ರೀ ಪಿ, ಅನುಷಾ ಡಿ ಜೆ, ಚೈತ್ರ ಹಾಗೂ ಬೋಧಕೇತರ ಸಿಬ್ಬಂದಿ ವಂದನಾ ಮತ್ತು ಪ್ರಥಮ ಹಾಗೂ ದ್ವಿತೀಯ ಬಿ.ಎಡ್. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಪ್ರಶಿಕ್ಷಣಾರ್ಥಿಗಳಾದ ತೇಜಸ್ವಿನಿ ಸ್ವಾಗತಿಸಿ, ಕಿರಣ್ ಧನ್ಯವಾದವಿತ್ತರು. ಕೀರ್ತನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!