September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

ಬೆಳ್ತಂಗಡಿ: ಉಪ ವಲಯ ಅರಣ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ವಲಯದ ಪ್ರಶಾಂತ್ ಹಾಗೂ ಕು. ಕಮಲರವರು ಅರಣ್ಯ ರಕ್ಷಣೆ, ಒತ್ತುವರಿ ತೆರವು ಕಾರ್ಯಗಳಲ್ಲಿ ಅಮೋಘ ಸಾಧನೆ ಮಾಡಿರುವುದಕ್ಕೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದು ಇವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮುಖ್ಯಮಂತ್ರಿ ಪದಕವನ್ನು ಹಸ್ತಾಂತರಿಸಿ ಅಭಿನಂದಿಸಿ ಶುಭ ಹಾರೈಸಿದರು.

ಪ್ರಶಾಂತ್‌ರವರು ಬೈಂದೂರು ಗ್ರಾಮದ ಮರವಂತೆ ನಿವಾಸಿಯಾಗಿದ್ದು 2008ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯಕ್ಕೆ ಸೇರಿದ್ದರು. 2010ರಲ್ಲಿ ಅರಣ್ಯ ಇಲಾಖೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕಲಬುರ್ಗಿ ಜಿಲ್ಲೆಯ ಜೇವರ್ಗಿ ಸಾಮಾಜಿಕ ಅರಣ್ಯ ವಲಯಕ್ಕೆ ನೇಮಕಗೊಂಡು ನಂತರ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ವನ್ಯಜೀವಿ ನಿಲಯ, ಮೂಡಬಿದ್ರೆ ವಲಯದಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. 2015, ಡಿಸೆಂಬರ್‌ನಲ್ಲಿ ಉಪ್ಪಿನಂಗಡಿ ವಲಯದ ಕಳೆಂಜ ಶಾಖೆಗೆ ವರ್ಗಾವಣೆಗೊಂಡು ಸತತ 8 ವರ್ಷ ಕರ್ತವ್ಯ ನಿರ್ವಹಿಸಿ, 2024ರ ಜುಲೈ 11 ರಂದು ವರ್ಗಾವಣೆಗೊಂಡು ಪ್ರಸ್ತುತ ಮಂಗಳೂರು ಅರಣ್ಯ ಸಂಚಾರಿ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕು.ಕಮಲರವರು ಮೂಲತಃ ಉಜಿರೆ ನಿವಾಸಿ 2005ರಲ್ಲಿ ನೇರ ನೇಮಕಾತಿ ಮೂಲಕ ಬೆಳ್ತಂಗಡಿ ವಲಯದ ಅರಣ್ಯ ವೀಕ್ಷಕರಾಗಿ ನೇಮಕಗೊಂಡು ಬಳಿಕ ಅರಣ್ಯ ರಕ್ಷಕರಾಗಿ ಪದೋನ್ನತಿಗೊಂಡು ಬೆಳ್ತಂಗಡಿ ವಲಯದ ಚಿಬಿದ್ರಿ ತೋಟತ್ತಡಿ, ನೆರಿಯಾ, ಪುದುವೆಟ್ಟು ಇಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2020ರಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಪದೋನ್ನತಿ ಹೊಂದಿ ಉಪ್ಪಿನಂಗಡಿ ವಲಯದ ಶಿಬಾಜೆ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಅಲ್ಲಿಂದ ಮಂಗಳೂರಿನ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿಗೆ ವರ್ಗಾವಣೆಗೊಂಡರು. ಪ್ರಸ್ತುತ ಕಮಲರವರು ವಿಶೇಷ ಕರ್ತವ್ಯ ನಿಮಿತ್ತ ಬೆಳ್ತಂಗಡಿ ವಲಯಕ್ಕೆ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related posts

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya
error: Content is protected !!