March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

ಕಳಿಯ : ಗ್ರಾಮ ಪಂಚಾಯಿತಿ ಕಳಿಯ ಮತ್ತು ಪಶುಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರವು ಸೆ. 5 ರಂದು ಕಳಿಯ ಗ್ರಾಮ ಪಂಚಾಯಿತಿ ವಠಾರದಲ್ಲಿ ಜರಗಿತು.


ಲಸಿಕ ಶಿಬಿರವನ್ನು ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷ ದಿವಾಕರ ಎಂ ಚಾಲನೆ ನೀಡಿ ಮಾತಾನಾಡಿ ರೇಬಿಸ್ ರೋಗದ ನಿರ್ಮೂಲನೆಗೆ ಪಂಚಾಯತ್ ಕಡೆಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆಂದು ಭರವಸೆ ನೀಡಿದರು.

ಈ ವೇಳೆ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇದರ ಸಹಾಯಕ ನಿರ್ದೇಶಕರಾದ ಡಾ. ರವಿಕುಮಾರ್ ರವರು ಈ ಶಿಬಿರದ ಬಗ್ಗೆ ಮಾಹಿತಿ ನೀಡುತ್ತಾ ಕೇಂದ್ರ ಸರ್ಕಾರದ ಯೋಜನೆಯಂತೆ 2030 ಅವಧಿಗೆ ರೇಬಿಸ್ ರೋಗ ಸಂಪೂರ್ಣ ನಿರ್ಮೂಲನಾ ಬಹುದೊಡ್ಡ ಕನಸಾಗಿದ್ದು ಇದನ್ನು ನನಸುಗೊಳಿಸಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಅದ್ಯಕ್ಷರಾದ ಶ್ರೀಮತಿ ಸುಭಾಷಿಣಿ ಕೆ , ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಹಾಗೂ ಸ್ಥಳಿಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇಲ್ಲಿಯ ಸಿಬ್ಬಂದಿಗಳಾದ ರಂಗನಾಥ್ ಸಿ ಆರ್ ಮತ್ತು ಚಂದ್ರಕುಮಾರ್ , ಕಳಿಯ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ, ರವಿ ಹೆಚ್, ಸುರೇಶ್ ಕುಮಾರ್ ,ಸುಚಿತ್ರಾ, ಶಶಿಕಲಾ , ನಂದಿನಿ, ಮಾನಸ, ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಶುಸಖಿಯಾದ ಕೆ ರೂಪ ಸಹಕರಿಸಿದರು.

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯರ 2 ತಂಡಗಳನ್ನು ರಚಿಸಿ ಸುಮಾರು 17 ಕ್ಕೂ ಹೆಚ್ಚಿನ ಕಡೆ ಸುಮಾರು 20೦ ಕ್ಕೂ ಹೆಚ್ಚು ಸಾಕು ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆಯನ್ನು ಉಚಿತವಾಗಿ ಹಾಕಿಸಿ ಕೊಂಡರು.

ಪಂಚಾಯತ್ ಕಾರ್ಯದರ್ಶಿಯವರಾದ ಕುಂಞ ಕೆ ಇವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya
error: Content is protected !!