23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

ಕಳಿಯ : ಗ್ರಾಮ ಪಂಚಾಯಿತಿ ಕಳಿಯ ಮತ್ತು ಪಶುಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರವು ಸೆ. 5 ರಂದು ಕಳಿಯ ಗ್ರಾಮ ಪಂಚಾಯಿತಿ ವಠಾರದಲ್ಲಿ ಜರಗಿತು.


ಲಸಿಕ ಶಿಬಿರವನ್ನು ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷ ದಿವಾಕರ ಎಂ ಚಾಲನೆ ನೀಡಿ ಮಾತಾನಾಡಿ ರೇಬಿಸ್ ರೋಗದ ನಿರ್ಮೂಲನೆಗೆ ಪಂಚಾಯತ್ ಕಡೆಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆಂದು ಭರವಸೆ ನೀಡಿದರು.

ಈ ವೇಳೆ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇದರ ಸಹಾಯಕ ನಿರ್ದೇಶಕರಾದ ಡಾ. ರವಿಕುಮಾರ್ ರವರು ಈ ಶಿಬಿರದ ಬಗ್ಗೆ ಮಾಹಿತಿ ನೀಡುತ್ತಾ ಕೇಂದ್ರ ಸರ್ಕಾರದ ಯೋಜನೆಯಂತೆ 2030 ಅವಧಿಗೆ ರೇಬಿಸ್ ರೋಗ ಸಂಪೂರ್ಣ ನಿರ್ಮೂಲನಾ ಬಹುದೊಡ್ಡ ಕನಸಾಗಿದ್ದು ಇದನ್ನು ನನಸುಗೊಳಿಸಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಅದ್ಯಕ್ಷರಾದ ಶ್ರೀಮತಿ ಸುಭಾಷಿಣಿ ಕೆ , ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಹಾಗೂ ಸ್ಥಳಿಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇಲ್ಲಿಯ ಸಿಬ್ಬಂದಿಗಳಾದ ರಂಗನಾಥ್ ಸಿ ಆರ್ ಮತ್ತು ಚಂದ್ರಕುಮಾರ್ , ಕಳಿಯ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ, ರವಿ ಹೆಚ್, ಸುರೇಶ್ ಕುಮಾರ್ ,ಸುಚಿತ್ರಾ, ಶಶಿಕಲಾ , ನಂದಿನಿ, ಮಾನಸ, ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಶುಸಖಿಯಾದ ಕೆ ರೂಪ ಸಹಕರಿಸಿದರು.

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯರ 2 ತಂಡಗಳನ್ನು ರಚಿಸಿ ಸುಮಾರು 17 ಕ್ಕೂ ಹೆಚ್ಚಿನ ಕಡೆ ಸುಮಾರು 20೦ ಕ್ಕೂ ಹೆಚ್ಚು ಸಾಕು ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆಯನ್ನು ಉಚಿತವಾಗಿ ಹಾಕಿಸಿ ಕೊಂಡರು.

ಪಂಚಾಯತ್ ಕಾರ್ಯದರ್ಶಿಯವರಾದ ಕುಂಞ ಕೆ ಇವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya
error: Content is protected !!