ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

ಕಳಿಯ : ಗ್ರಾಮ ಪಂಚಾಯಿತಿ ಕಳಿಯ ಮತ್ತು ಪಶುಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರವು ಸೆ. 5 ರಂದು ಕಳಿಯ ಗ್ರಾಮ ಪಂಚಾಯಿತಿ ವಠಾರದಲ್ಲಿ ಜರಗಿತು.


ಲಸಿಕ ಶಿಬಿರವನ್ನು ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷ ದಿವಾಕರ ಎಂ ಚಾಲನೆ ನೀಡಿ ಮಾತಾನಾಡಿ ರೇಬಿಸ್ ರೋಗದ ನಿರ್ಮೂಲನೆಗೆ ಪಂಚಾಯತ್ ಕಡೆಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆಂದು ಭರವಸೆ ನೀಡಿದರು.

ಈ ವೇಳೆ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇದರ ಸಹಾಯಕ ನಿರ್ದೇಶಕರಾದ ಡಾ. ರವಿಕುಮಾರ್ ರವರು ಈ ಶಿಬಿರದ ಬಗ್ಗೆ ಮಾಹಿತಿ ನೀಡುತ್ತಾ ಕೇಂದ್ರ ಸರ್ಕಾರದ ಯೋಜನೆಯಂತೆ 2030 ಅವಧಿಗೆ ರೇಬಿಸ್ ರೋಗ ಸಂಪೂರ್ಣ ನಿರ್ಮೂಲನಾ ಬಹುದೊಡ್ಡ ಕನಸಾಗಿದ್ದು ಇದನ್ನು ನನಸುಗೊಳಿಸಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಅದ್ಯಕ್ಷರಾದ ಶ್ರೀಮತಿ ಸುಭಾಷಿಣಿ ಕೆ , ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಹಾಗೂ ಸ್ಥಳಿಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇಲ್ಲಿಯ ಸಿಬ್ಬಂದಿಗಳಾದ ರಂಗನಾಥ್ ಸಿ ಆರ್ ಮತ್ತು ಚಂದ್ರಕುಮಾರ್ , ಕಳಿಯ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ, ರವಿ ಹೆಚ್, ಸುರೇಶ್ ಕುಮಾರ್ ,ಸುಚಿತ್ರಾ, ಶಶಿಕಲಾ , ನಂದಿನಿ, ಮಾನಸ, ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಶುಸಖಿಯಾದ ಕೆ ರೂಪ ಸಹಕರಿಸಿದರು.

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯರ 2 ತಂಡಗಳನ್ನು ರಚಿಸಿ ಸುಮಾರು 17 ಕ್ಕೂ ಹೆಚ್ಚಿನ ಕಡೆ ಸುಮಾರು 20೦ ಕ್ಕೂ ಹೆಚ್ಚು ಸಾಕು ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆಯನ್ನು ಉಚಿತವಾಗಿ ಹಾಕಿಸಿ ಕೊಂಡರು.

ಪಂಚಾಯತ್ ಕಾರ್ಯದರ್ಶಿಯವರಾದ ಕುಂಞ ಕೆ ಇವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ

Suddi Udaya

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!