23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

ಕಳಿಯ : ಗ್ರಾಮ ಪಂಚಾಯಿತಿ ಕಳಿಯ ಮತ್ತು ಪಶುಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರವು ಸೆ. 5 ರಂದು ಕಳಿಯ ಗ್ರಾಮ ಪಂಚಾಯಿತಿ ವಠಾರದಲ್ಲಿ ಜರಗಿತು.


ಲಸಿಕ ಶಿಬಿರವನ್ನು ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷ ದಿವಾಕರ ಎಂ ಚಾಲನೆ ನೀಡಿ ಮಾತಾನಾಡಿ ರೇಬಿಸ್ ರೋಗದ ನಿರ್ಮೂಲನೆಗೆ ಪಂಚಾಯತ್ ಕಡೆಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆಂದು ಭರವಸೆ ನೀಡಿದರು.

ಈ ವೇಳೆ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇದರ ಸಹಾಯಕ ನಿರ್ದೇಶಕರಾದ ಡಾ. ರವಿಕುಮಾರ್ ರವರು ಈ ಶಿಬಿರದ ಬಗ್ಗೆ ಮಾಹಿತಿ ನೀಡುತ್ತಾ ಕೇಂದ್ರ ಸರ್ಕಾರದ ಯೋಜನೆಯಂತೆ 2030 ಅವಧಿಗೆ ರೇಬಿಸ್ ರೋಗ ಸಂಪೂರ್ಣ ನಿರ್ಮೂಲನಾ ಬಹುದೊಡ್ಡ ಕನಸಾಗಿದ್ದು ಇದನ್ನು ನನಸುಗೊಳಿಸಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಅದ್ಯಕ್ಷರಾದ ಶ್ರೀಮತಿ ಸುಭಾಷಿಣಿ ಕೆ , ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಹಾಗೂ ಸ್ಥಳಿಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇಲ್ಲಿಯ ಸಿಬ್ಬಂದಿಗಳಾದ ರಂಗನಾಥ್ ಸಿ ಆರ್ ಮತ್ತು ಚಂದ್ರಕುಮಾರ್ , ಕಳಿಯ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ, ರವಿ ಹೆಚ್, ಸುರೇಶ್ ಕುಮಾರ್ ,ಸುಚಿತ್ರಾ, ಶಶಿಕಲಾ , ನಂದಿನಿ, ಮಾನಸ, ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಶುಸಖಿಯಾದ ಕೆ ರೂಪ ಸಹಕರಿಸಿದರು.

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯರ 2 ತಂಡಗಳನ್ನು ರಚಿಸಿ ಸುಮಾರು 17 ಕ್ಕೂ ಹೆಚ್ಚಿನ ಕಡೆ ಸುಮಾರು 20೦ ಕ್ಕೂ ಹೆಚ್ಚು ಸಾಕು ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆಯನ್ನು ಉಚಿತವಾಗಿ ಹಾಕಿಸಿ ಕೊಂಡರು.

ಪಂಚಾಯತ್ ಕಾರ್ಯದರ್ಶಿಯವರಾದ ಕುಂಞ ಕೆ ಇವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ನೆರಿಯ: ಬೀಜದಡಿ ನಿವಾಸಿ ಗೋಪಿ ನಿಧನ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

Suddi Udaya
error: Content is protected !!