March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ನಡ: ಮಂಜೊಟ್ಟಿ ಪಣಿಕ್ಕಲ ನಿವಾಸಿಯಾದ ಧರ್ಣಪ್ಪ ಪೂಜಾರಿ(55 ವರ್ಷ) ಇವರು ಸೆ.4ರಂದು ಸಂಜೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಡ ಗ್ರಾಮದ ಪಣಿಕ್ಕಲ ನಿವಾಸಿ ಲಲಿತ ರವರ ದೂರಿನಂತೆ ಲಲಿತ ರವರ ಪತಿ ದರ್ಣಪ್ಪ ಪೂಜಾರಿ ರವರು ಮದುವೆಯಾಗಿ 28 ವರ್ಷಗಳಾಗಿದ್ದು ಮಕ್ಕಳಾಗಿರುವುದಿಲ್ಲ ಇದೇ ವಿಚಾರದಲ್ಲಿ ಲಲಿತ ಪತಿ ಧರ್ಣಪ್ಪ ಪೂಜಾರಿ ರವರು ಮಾನಸಿಕವಾಗಿ ಮನನೊಂದು ಮಾನಸಿಕ ಖಾಯಿಲೆಗೆ ತುತ್ತಾಗಿದ್ದವರು ಸುಮಾರು 10 ವರ್ಷಗಳಿಂದ ಮಾನಸಿಕ ತಜ್ಞರಿಂದ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದವರು ಸುಮಾರು 5 ತಿಂಗಳಿನಿಂದ ಯಾವುದೇ ಕೆಲಸಕ್ಕೂ ಹೋಗದೆ ಮನೆಯಲ್ಲಿಯೇ ಇದ್ದುದಾಗಿರುತ್ತದೆ. ಹೀಗಿರುವಾಗ ಸೆ.04 ರಂದು ಲಲಿತ ರವರು ಸಂಜೆ 4.30 ಗಂಟೆಗೆ ಮಂಜೊಟ್ಟಿ ಹಾಲಿನ ಡಿಪೊಗೆ ಹೋಗಿದ್ದು ಸಂಜೆ 5.30 ಗಂಟೆಗೆ ಮನೆಗೆ ವಾಪಾಸ್ಸು ಬಂದು ನೋಡಿದಾಗ ಲಲಿತ ಗಂಡ ಮನೆಯ ಛಾವಡಿಗೆ ಹಾಕಿದ ಮರದ ಅಡ್ಡಕ್ಕೆ ನೇಣು ಬಿಗಿದುಕೊಂಡಿರುವುದನ್ನು ಕಂಡು ನೆರೆ ಮನೆಯ ಲಲಿತ ರವರ ಅಣ್ಣ ಉಮೇಶ್ ಎಂಬಾತನನ್ನು ಬರಮಾಡಿಕೊಂಡು ಕುತ್ತಿಗೆಗೆ ಬಿಗಿದುಕೊಂಡಿದ್ದ ಬೈರಾಸ್ ನ್ನು ತುಂಡು ಮಾಡಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ಆಸ್ಪತ್ರೆಯ ವೈಧ್ಯಾಧಿಕಾರಿಯವರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅಪರಾದ 38/2024 ಕಲಂ: 194 ಬಿಎನ್ ಎಸ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya
error: Content is protected !!