September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ನಡ: ಮಂಜೊಟ್ಟಿ ಪಣಿಕ್ಕಲ ನಿವಾಸಿಯಾದ ಧರ್ಣಪ್ಪ ಪೂಜಾರಿ(55 ವರ್ಷ) ಇವರು ಸೆ.4ರಂದು ಸಂಜೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಡ ಗ್ರಾಮದ ಪಣಿಕ್ಕಲ ನಿವಾಸಿ ಲಲಿತ ರವರ ದೂರಿನಂತೆ ಲಲಿತ ರವರ ಪತಿ ದರ್ಣಪ್ಪ ಪೂಜಾರಿ ರವರು ಮದುವೆಯಾಗಿ 28 ವರ್ಷಗಳಾಗಿದ್ದು ಮಕ್ಕಳಾಗಿರುವುದಿಲ್ಲ ಇದೇ ವಿಚಾರದಲ್ಲಿ ಲಲಿತ ಪತಿ ಧರ್ಣಪ್ಪ ಪೂಜಾರಿ ರವರು ಮಾನಸಿಕವಾಗಿ ಮನನೊಂದು ಮಾನಸಿಕ ಖಾಯಿಲೆಗೆ ತುತ್ತಾಗಿದ್ದವರು ಸುಮಾರು 10 ವರ್ಷಗಳಿಂದ ಮಾನಸಿಕ ತಜ್ಞರಿಂದ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದವರು ಸುಮಾರು 5 ತಿಂಗಳಿನಿಂದ ಯಾವುದೇ ಕೆಲಸಕ್ಕೂ ಹೋಗದೆ ಮನೆಯಲ್ಲಿಯೇ ಇದ್ದುದಾಗಿರುತ್ತದೆ. ಹೀಗಿರುವಾಗ ಸೆ.04 ರಂದು ಲಲಿತ ರವರು ಸಂಜೆ 4.30 ಗಂಟೆಗೆ ಮಂಜೊಟ್ಟಿ ಹಾಲಿನ ಡಿಪೊಗೆ ಹೋಗಿದ್ದು ಸಂಜೆ 5.30 ಗಂಟೆಗೆ ಮನೆಗೆ ವಾಪಾಸ್ಸು ಬಂದು ನೋಡಿದಾಗ ಲಲಿತ ಗಂಡ ಮನೆಯ ಛಾವಡಿಗೆ ಹಾಕಿದ ಮರದ ಅಡ್ಡಕ್ಕೆ ನೇಣು ಬಿಗಿದುಕೊಂಡಿರುವುದನ್ನು ಕಂಡು ನೆರೆ ಮನೆಯ ಲಲಿತ ರವರ ಅಣ್ಣ ಉಮೇಶ್ ಎಂಬಾತನನ್ನು ಬರಮಾಡಿಕೊಂಡು ಕುತ್ತಿಗೆಗೆ ಬಿಗಿದುಕೊಂಡಿದ್ದ ಬೈರಾಸ್ ನ್ನು ತುಂಡು ಮಾಡಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ಆಸ್ಪತ್ರೆಯ ವೈಧ್ಯಾಧಿಕಾರಿಯವರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅಪರಾದ 38/2024 ಕಲಂ: 194 ಬಿಎನ್ ಎಸ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya
error: Content is protected !!