July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ನಡ: ಮಂಜೊಟ್ಟಿ ಪಣಿಕ್ಕಲ ನಿವಾಸಿಯಾದ ಧರ್ಣಪ್ಪ ಪೂಜಾರಿ(55 ವರ್ಷ) ಇವರು ಸೆ.4ರಂದು ಸಂಜೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಡ ಗ್ರಾಮದ ಪಣಿಕ್ಕಲ ನಿವಾಸಿ ಲಲಿತ ರವರ ದೂರಿನಂತೆ ಲಲಿತ ರವರ ಪತಿ ದರ್ಣಪ್ಪ ಪೂಜಾರಿ ರವರು ಮದುವೆಯಾಗಿ 28 ವರ್ಷಗಳಾಗಿದ್ದು ಮಕ್ಕಳಾಗಿರುವುದಿಲ್ಲ ಇದೇ ವಿಚಾರದಲ್ಲಿ ಲಲಿತ ಪತಿ ಧರ್ಣಪ್ಪ ಪೂಜಾರಿ ರವರು ಮಾನಸಿಕವಾಗಿ ಮನನೊಂದು ಮಾನಸಿಕ ಖಾಯಿಲೆಗೆ ತುತ್ತಾಗಿದ್ದವರು ಸುಮಾರು 10 ವರ್ಷಗಳಿಂದ ಮಾನಸಿಕ ತಜ್ಞರಿಂದ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದವರು ಸುಮಾರು 5 ತಿಂಗಳಿನಿಂದ ಯಾವುದೇ ಕೆಲಸಕ್ಕೂ ಹೋಗದೆ ಮನೆಯಲ್ಲಿಯೇ ಇದ್ದುದಾಗಿರುತ್ತದೆ. ಹೀಗಿರುವಾಗ ಸೆ.04 ರಂದು ಲಲಿತ ರವರು ಸಂಜೆ 4.30 ಗಂಟೆಗೆ ಮಂಜೊಟ್ಟಿ ಹಾಲಿನ ಡಿಪೊಗೆ ಹೋಗಿದ್ದು ಸಂಜೆ 5.30 ಗಂಟೆಗೆ ಮನೆಗೆ ವಾಪಾಸ್ಸು ಬಂದು ನೋಡಿದಾಗ ಲಲಿತ ಗಂಡ ಮನೆಯ ಛಾವಡಿಗೆ ಹಾಕಿದ ಮರದ ಅಡ್ಡಕ್ಕೆ ನೇಣು ಬಿಗಿದುಕೊಂಡಿರುವುದನ್ನು ಕಂಡು ನೆರೆ ಮನೆಯ ಲಲಿತ ರವರ ಅಣ್ಣ ಉಮೇಶ್ ಎಂಬಾತನನ್ನು ಬರಮಾಡಿಕೊಂಡು ಕುತ್ತಿಗೆಗೆ ಬಿಗಿದುಕೊಂಡಿದ್ದ ಬೈರಾಸ್ ನ್ನು ತುಂಡು ಮಾಡಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ಆಸ್ಪತ್ರೆಯ ವೈಧ್ಯಾಧಿಕಾರಿಯವರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅಪರಾದ 38/2024 ಕಲಂ: 194 ಬಿಎನ್ ಎಸ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!