23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

ಕಣಿಯೂರು: ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ(46ವ)ರವರು ಸೆ.4ರಂದು ಅನಾರೋಗ್ಯದಿಂದ ನಿಧನರಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪದ್ಮುಂಜ ದರ್ಖಾಸು ಮನೆ ಉಮೇಶ್ ರವರ ದೂರಿನಂತೆ ಉಮೇಶ್ ರವರ ಅಣ್ಣ ಕುಶಾಲಪ್ಪ (46) ರವರು ಸುಮಾರು 02 ವರ್ಷಗಳಿಂದ ಬಿ.ಪಿ ಶುಗರ್, ಅಸ್ತಮ ಖಾಯಿಲೆಯಿಂದ ಬಳಲುತ್ತಿದ್ದು ಇತೀಚೆಗೆ ಕೆಲಸಕ್ಕೆ ಹೋಗದೇ ಕಣಿಯೂರು ಗ್ರಾಮದ ಪದ್ಮುಂಜ ದರ್ಖಾಸು ಮನೆಯಲ್ಲಿ ಇದ್ದು, ಸುಮಾರು 03 ದಿನಗಳಿಂದ ಊಟ ಮಾಡಲು ಆಗದೇ ವಾಂತಿ ಮಾಡಿಕೊಂಡು ಮನೆಯಲ್ಲಿ ಇದ್ದವನು ಸೆ. 04. ರಂದು ಕುಶಾಲಪ್ಪನು ವಿಪರೀತ ಸುಸ್ತು ಅಗಿ ಯಾವುದೇ ಮಾತುಗಳನ್ನು ಆಡದೇ ಇದ್ದವನನ್ನು ಉಮೇಶ್ ಮತ್ತು ಕುಶಾಲಪ್ಪರವರ ಹೆಂಡತಿ ಉಷಾ ಹಾಗೂ ನೆರೆಮನೆಯವರಾದ ಕೊರಗಪ್ಪ ಎಂಬವರು ಅಂಬ್ಯುಲೆನ್ಸ್ ವಾಹನದಲ್ಲಿ ಬೆಳ್ತಂಗಡಿ ಸರಕಾರಿ ಅಸ್ಷತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಕುಶಾಲಪ್ಪನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ, ಕುಶಾಲಪ್ಪನು ಸರಿಯಾಗಿ ಆಹಾರ ಸೇವನೆ ಮಾಡದೇ ಅಥವಾ ಬೇರೆ ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಯುಡಿಆರ್ ನಂಬ್ರ: 32/2024 ಕಲಂ: 194 BNSS. ಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya
error: Content is protected !!